ಬ್ರೇಕಿಂಗ್ ನ್ಯೂಸ್
 
            
                        19-01-21 03:22 pm Mangalore Correspondent ಕರಾವಳಿ
 
            ಮಂಗಳೂರು, ಜ.19: ಉಳ್ಳಾಲದ ಎಸ್ ಡಿಪಿಐ ಮುಖಂಡ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಘಟನೆಯ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಿಷನರ್, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪೋಕ್ಸೋ ಮತ್ತು ಮಹಿಳೆಗೆ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಯ ಪತ್ತೆಗೆ ಎರಡು ತಂಡಗಳನ್ನು ರಚಿಸಿದ್ದೇವೆ. ಆರೋಪಿ ಕೇರಳಕ್ಕೆ ಪರಾರಿಯಾಗಿರುವ ಶಂಕೆಯಿದ್ದು, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ, ಮಹಿಳೆಯನ್ನು ದೂರು ನೀಡದಂತೆ ಕೆಲವು ಸಮುದಾಯದ ಮುಖಂಡರು ಒತ್ತಡ ಹೇರಿದ ಬಗ್ಗೆಯೂ ಮಹಿಳೆ ದೂರು ನೀಡಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಸತತವಾಗಿ ಪೀಡಿಸಿದ ಬಗ್ಗೆ ದೂರು ಲಭಿಸಿತ್ತು. ಕೊನೆಯ ಬಾರಿಗೆ ಕಳೆದ ಡಿ.25ರಂದು ಆತ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಆಕೆಯೇ ಸ್ವತಃ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಮಹಿಳೆ ಮತ್ತು ಮಕ್ಕಳನ್ನು ಚೈಲ್ಡ್ ಕೇರ್ ಸಂಸ್ಥೆಯವರು ಪರಿಶೀಲನೆ ನಡೆಸಿದ್ದು, ಕಿರುಕುಳ ಆಗಿರುವ ಬಗ್ಗೆ ದೃಢಪಟ್ಟ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.
ನಮಗೆ ಅಪರಾಧ ಮತ್ತು ಅಪರಾಧಿಗಳನ್ನು ಪತ್ತೆ ಮಾಡುವುದಷ್ಟೇ ಮುಖ್ಯ. ಅವರು ಯಾವ ಸಂಘಟನೆಯವರು, ರಾಜಕೀಯ ಪಕ್ಷದಲ್ಲಿ ಇದ್ದಾರೆಯೇ ಎಂಬ ಬಗ್ಗೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಅದರ ಅಗತ್ಯವೂ ಇಲ್ಲ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಎಸ್ ಡಿಪಿಎಐ ಉಳ್ಳಾಲ ಸಮಿತಿ ಅಧ್ಯಕ್ಷ ಸಿದ್ದೀಕ್ ಉಳ್ಳಾಲ್ ಎಂಬಾತ ಈ ದುಷ್ಕೃತ್ಯ ಎಸಗಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಮೊದಲ ಬಾರಿಗೆ ಸುದ್ದಿ ಪ್ರಕಟಿಸಿ ಪ್ರಕರಣ ಬಯಲಿಗೆ ತಂದಿತ್ತು ಎಂಬುದನ್ನು ಸ್ಮರಿಸಬಹುದು.
Video:
 
            
            
            A special team has been formed to arrest SDPI leader Sadiq from Ullal who has been alleged of sexual harassment on women and her two children.
 
    
            
             28-10-25 10:03 pm
                        
            
                  
                Bangalore Correspondent    
            
                    
 
    ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
 
    ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
 
    ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
 
    ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
 
    
            
             28-10-25 10:23 pm
                        
            
                  
                HK News Desk    
            
                    
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    
            
             28-10-25 08:36 pm
                        
            
                  
                Mangalore Correspondent    
            
                    
 
    ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
 
    ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
 
    ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
 
    ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
 
    
            
             28-10-25 10:48 pm
                        
            
                  
                Mangalore Correspondent    
            
                    
 
    ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
 
    ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
 
    ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm