ಬ್ರೇಕಿಂಗ್ ನ್ಯೂಸ್
13-08-20 03:56 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 13: ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಬಿಜೆಪಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಕೊರೊನಾ ಸೋಂಕು ದೃಢಗೊಂಡಿದೆ. ಸ್ವತಃ ಶಾಸಕರೇ ಈ ವಿಷಯವನ್ನು ತಮ್ಮ ಫೇಸ್ಬುಕ್ ಪೇಜ್ ಮೂಲಕ ದೃಢಪಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಲಾಲಾಜಿ ಆರ್. ಮೆಂಡನ್ ಹೋಮ್ ಕ್ವಾರಂಟೈನ್ ನಲ್ಲಿದ್ದರು. ಅವರ ಗಂಟಲದ್ರವ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿದ್ದು ದೃಢಗೊಂಡಿದೆ.
ಆದರೆ ತಮಗೆ ಯಾವುದೇ ರೋಗ ಲಕ್ಷಣಗಳಿಲ್ಲ, ಹೀಗಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತೇನೆ. ಕಾಪು ಕ್ಷೇತ್ರದ ಜನತೆ ಅಗತ್ಯ ಕೆಲಸಗಳಿಗಾಗಿ ಕಚೇರಿಯನ್ನು ಸಂಪರ್ಕಿಸಿ. ಶೀಘ್ರ ನಿಮ್ಮ ಸೇವೆ ಮಾಡಲು ಮರಳುತ್ತೇನೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳಿಗೆ ಮಹಾಮಾರಿ ಕೊರೊನಾ ಸೋಂಕು ತಗುಲುತ್ತಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರದಂತೆ ಹಲವು ಪ್ರಮುಖ ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಇಬ್ಬರು ನಾಯಕರು ಕೊರೊನಾ ವೈರಸ್ ನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm