ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm