ಬ್ರೇಕಿಂಗ್ ನ್ಯೂಸ್
20-01-21 09:49 pm Mangaluru Correspondent ಕರಾವಳಿ
ಕೊಣಾಜೆ, ಜ.20: ವಿದ್ಯುತ್ ಕಂಬಕ್ಕೆ ಗ್ಯಾಸ್ ಸಿಲಿಂಡರ್ ತುಂಬಿದ್ದ ಪಿಕ್ ಅಪ್ ವಾಹನ ಡಿಕ್ಕಿಯಾದ ಪರಿಣಾಮ ವಿದ್ಯುತ್ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದ್ದು , ಕೂದಲೆಲೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಸಂಜೆ 4 ಗಂಟೆ ವೇಳೆಗೆ ಪಜೀರು ಗ್ರಾಮ ಪಂಚಾಯತ್ ಕಚೇರಿಯ ಹಿಂಬದಿ ರಸ್ತೆಯಲ್ಲಿ HP ಗ್ಯಾಸ್ ಸಿಲಿಂಡರ್ ಗಳನ್ನು ಗ್ರಾಹಕರಿಗೆ ವಿತರಿಸುತ್ತಿದ್ದ ಪಿಕ್ ಅಪ್ ವಾಹನವು ರಿವರ್ಸ್ ತೆಗೆಯುವ ವೇಳೆ ಅಲ್ಲಿದ್ದ ವಿದ್ಯುತ್ ಕಂಬವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಂಬವು ತುಂಡಾಗಿ ಪಿಕ್ ಅಪ್ ವಾಹನದ ಮೇಲೆ ಉರುಳಿ ಬಿದ್ದಿದ್ದು ವಿದ್ಯುತ್ ಲೈನ್ ಸಿಲಿಂಡರ್ ಮೇಲೆ ಬಿದ್ದಿತ್ತು. ಅಷ್ಟರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಬೆಂಕಿ ಹತ್ತಿಕೊಳ್ಳುವುದರಿಂದ ತಪ್ಪಿದೆ. ಅವಘಡವನ್ನು ತಿಳಿಯದ ಮೆಸ್ಕಾಂ ಸಿಬ್ಬಂದಿ ಮತ್ತೆ ಪವರ್ ಆನ್ ಮಾಡಿದ್ದರ ಪರಿಣಾಮ ಬೆಂಕಿ ಹತ್ತಿದ್ದು ಸುತ್ತಮುತ್ತಲಿನ ಹುಲ್ಲುಗಾವಲಿಗೆ ಬೆಂಕಿ ಹತ್ತಿಕೊಂಡಿದೆ. ಮತ್ತೆ ವಿದ್ಯುತ್ ನಿಲುಗಡೆ ಆಗಿದ್ದು ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿ ನಂತರ ಬೆಂಕಿ ನಂದಿಸಿದ್ದಾರೆ.

ಪಿಕ್ ವಾಹನದ ಚಾಲಕ ಅಪಾಯ ಅರಿತು ಓಡಿದ್ದಾನೆ. ಅದೃಷ್ಟವಶಾತ್ ಪಿಕ್ ವಾಹನ ಮತ್ತು ಸಿಲಿಂಡರ್ ಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ವೇಳೆ ಗ್ಯಾಸ್ ಡೆಲಿವರಿ ಹುಡುಗ ಹತ್ತಿರದ ಮನೆಗೆ ಗ್ಯಾಸ್ ಹೊತ್ತು ಹೋಗಿದ್ದನೆನ್ನಲಾಗಿದೆ. ಬೆಂಕಿ ಹತ್ತಿಕೊಂಡ ಪ್ರದೇಶ ನಿರ್ಜನ ಪ್ರದೇಶವಾದುದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
HP Gas Cylinder pickup van rams into an electric pole in Pajir, Konaje in Mangalore. A great escape from a major catastrophe was avoided due to MESCOM workers.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm