ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm