ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm