ಬ್ರೇಕಿಂಗ್ ನ್ಯೂಸ್
20-01-21 09:57 pm Mangaluru Correspondent ಕರಾವಳಿ
ಮಂಗಳೂರು, ಜ.20: ನಗರದಲ್ಲಿ ಯುವ ಉದ್ಯಮಿಯಾಗಿದ್ದ ಗುರುಪುರ ಮೂಲದ ಚಂದ್ರಶೇಖರ್ ಶೆಟ್ಟಿ (38) ಎಂಬವರು ತನ್ನ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಎಸ್.ರಾವ್ ರಸ್ತೆಯಲ್ಲಿರುವ ಪೂಂಜಾ ಆರ್ಕೇಡ್ ನಲ್ಲಿ ಎರಡನೇ ಅಂತಸ್ತಿನಲ್ಲಿ ಇವರು ಕಚೇರಿ ಹೊಂದಿದ್ದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ವಿಚಾರ ಅರಿತ ಅವರ ತಮ್ಮ ಕೂಡಲೇ ಅಲ್ಲಿಗೆ ಆಗಮಿಸಿದ್ದು ನೇಣು ಹಗ್ಗದಿಂದ ಬಿಡಿಸಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಷ್ಟರಲ್ಲಿ ಚಂದ್ರಶೇಖರ್ ಸಾವು ಕಂಡಿದ್ದರು.
ಪೂಂಜಾ ಆರ್ಕೇಡ್ ಬಳಿಯ ಗೋಕುಲ್ ಮಾರ್ಕೆಟ್ ಸಂಕೀರ್ಣದಲ್ಲಿ ನಿರಂತರ ಪಬ್ಲಿಸಿಟಿ ಎನ್ನುವ ಹೆಸರಲ್ಲಿ ಶಾಪ್ ಹೊಂದಿದ್ದು ಗ್ರೀಟಿಂಗ್ಸ್, ಕಾರ್ಡ್, ಫ್ಲೆಕ್ಸ್ ವರ್ಕ್, ಡಿಸೈನಿಂಗ್ ಇನ್ನಿತರ ಕೆಲಸಗಳನ್ನು ಮಾಡಿಕೊಂಡಿದ್ದರು. ಪಾಲುದಾರಿಕೆಯಲ್ಲಿ ವ್ಯವಹಾರ ನಡೆಯುತ್ತಿತ್ತು ಎನ್ನಲಾಗಿದ್ದು ಕಳೆದ ಒಂದು ವರ್ಷದಲ್ಲಿ ನಷ್ಟ ಹೊಂದಿದ್ದರು.
ಸಂಜೆ ನಾಲ್ಕು ಗಂಟೆ ಸುಮಾರಿಗೆ ವಾಟ್ಸಪ್ ಸ್ಟೇಟಸ್ ನಲ್ಲಿ ಸಜ್ಜನರನ್ನು ನೋಯಿಸಬೇಡಿ, ನೋಯಿಸಿದರೆ ನಿಮ್ಮ ಜೀವನದಿಂದ ದೂರವಾಗುತ್ತಾರೆ ಎನ್ನುವ ಅರ್ಥದಲ್ಲಿ ವಾಕ್ಯಗಳನ್ನು ಹಾಕಿದ್ದರಂತೆ. ಇದರಿಂದಾಗಿ ಚಂದ್ರಶೇಖರ್ ಶೆಟ್ಟಿ ಯಾರಿಂದಲೋ ತೀವ್ರ ನೊಂದಿದ್ದರು ಅನ್ನುವ ಮಾತು ಕೇಳಿಬರುತ್ತಿದೆ. ಅವಿವಾಹಿತರಾಗಿದ್ದ ಚಂದ್ರಶೇಖರ್ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 38-year-old businessman Chandrashekar Shetty, proprietor of Niranthara Publicity in Mangalore has committed suicide at his own office here on Wednesday, January 20.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am