ಬ್ರೇಕಿಂಗ್ ನ್ಯೂಸ್
13-08-20 04:25 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 13: ಬೆಂಗಳೂರಿನಲ್ಲಿ ಧಾರ್ಮಿಕ ನಿಂದನೆ ವಿಚಾರ ಹಿಂಸೆಯ ಕಿಡಿ ಎಬ್ಬಿಸಿದ ಬೆನ್ನಲ್ಲೇ ಕೋಮು ದಳ್ಳುರಿಯಲ್ಲಿ ಕುಖ್ಯಾತಿ ಗಳಿಸಿರುವ ಮಂಗಳೂರಿನಲ್ಲಿ ಪೊಲೀಸರು ಹೈ ಎಲರ್ಟ್ ಆಗಿದ್ದಾರೆ. ದ್ವೇಷದ ಕಿಡಿ ಕರಾವಳಿಯಲ್ಲೂ ಧಗಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.
ಈ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಪೋಸ್ಟ್ ಗಳನ್ನು ಹರಿಯ ಬಿಡಲಾಗುತ್ತಿದ್ದು ಹಿಂದು ದೇವ ನಿಂದೆಯ ಬಗ್ಗೆ ಯಾಕೆ ಕ್ರಮ ಕೈಗೊಂಡಿಲ್ಲ ಎನ್ನುವ ನೆಲೆಯಲ್ಲಿ ಪ್ರಶ್ನಿಸಿ ಪೋಸ್ಟ್ ಮಾಡಲಾಗುತ್ತಿದೆ. ನಾಲ್ಕು ವರ್ಷಗಳ ಹಿಂದೆ ಬಶೀರ್ ಅಡ್ಯಾರ್ ಎನ್ನುವ ಹೆಸರಿನ ನಕಲಿ ಖಾತೆಯಲ್ಲಿ ಲಕ್ಷ್ಮೀ ದೇವಿಯನ್ನು ವಿಕೃತವಾಗಿ ಚಿತ್ರಿಸಿ ಹಾಕಿದ್ದ ಪೋಸ್ಟ್ ಈಗ ವೈರಲ್ ಆಗುತ್ತಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಸೈಬರ್ ಪೊಲೀಸರು ಅಲರ್ಟ್ ಆಗಿದ್ದು ಇಂಥ ಪೋಸ್ಟ್ ಗಳನ್ನು ಹರಿಯಬಿಟ್ಟು ಕಮೆಂಟ್ಸ್ ಗಳನ್ನು ಮಾಡಿದರೆ ಕ್ರಮ ಕೈಗೊಳ್ಳುವ ಸೂಚನೆ ನೀಡಲಾಗಿದೆ.


ಮಂಗಳೂರು ನಗರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಈ ವಿಚಾರದಲ್ಲಿ ಸೈಬರ್ ಕ್ರೈಮ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ಹಾಗೂ ಇತರೆ ಯಾವುದೇ ಮತದ ಧಾರ್ಮಿಕ ವಿಚಾರಗಳಿಗೆ ಸಂಬಂಧ ಪಟ್ಟಂತೆ, ಯಾವುದೇ ವ್ಯಕ್ತಿಗಳು ಧಾರ್ಮಿಕ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದಾಗಲಿ , ಹಂಚಿಕೊಳ್ಳುವುದಾಗಲಿ ಮತ್ತು ಅಭಿಪ್ರಾಯ ವ್ಯಕ್ತಪಡಿಸುವುದಾಗಲಿ ಅಥವಾ ಟೀಕೆ ಮಾಡವುದಾಗಲಿ ಕಂಡು ಬಂದರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.
ಇದೇ ವೇಳೆ, ಸಾಮಾಜಿಕ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ಮಂಗಳೂರಿಗೆ ಕರೆಸಿಕೊಳ್ಳಲಾಗಿದೆ. ಎರಡು ತುಕಡಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಆಗಮಿಸಿದ್ದು ಮಂಗಳೂರಿನ ಬಂದರು ಪ್ರದೇಶದಲ್ಲಿ ಆರ್ ಎಎಫ್ ಮತ್ತು ಕೆಎಸ್ ಆರ್ ಪಿ ಪೊಲೀಸರು ಪಥ ಸಂಚಲನ ನಡೆಸಿದ್ದು ತಮ್ಮ ಇರವನ್ನು ತೋರಿಸಿದ್ದಾರೆ.

ಕಳೆದ ಡಿಸೆಂಬರ್ ತಿಂಗಳಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸಿಎಎ ವಿಚಾರದಲ್ಲಿ ಹೊತ್ತಿಕೊಂಡ ಪ್ರತಿಭಟನೆ ಬಳಿಕ ಹಿಂಸೆಗೆ ತಿರುಗಿ ಗೋಲಿಬಾರ್ ಗೆ ಕಾರಣವಾಗಿತ್ತು. ಅದೇ ರೀತಿಯ ಕೃತ್ಯ ಈಗ ಬೆಂಗಳೂರಿನಲ್ಲಿ ಮರುಕಳಿಸಿದ್ದು ಎರಡು ಘಟನೆಗಳ ನಡುವಿನ ಹೋಲಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಎರಡೂ ಘಟನೆಗಳಲ್ಲಿ ಎಸ್ಡಿಪಿಐ ಮತ್ತು ಪಿಎಫ್ಐ ಕಾರ್ಯಕರ್ತರ ಪಾತ್ರದ ಬಗ್ಗೆ ಆರೋಪ ಕೇಳಿಬಂದಿರುವ ಹಿನ್ನೆಲೆ ಈ ಎರಡೂ ಸಂಘಟನೆಗಳು ಪ್ರಬಲವಾಗಿರುವ ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm