ಬ್ರೇಕಿಂಗ್ ನ್ಯೂಸ್
21-01-21 04:02 pm Mangaluru Correspondent ಕರಾವಳಿ
ಮಂಗಳೂರು, ಜ.21: ಖಾಸಗಿ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಕಟ್ಟತ್ತಡ್ಕ ನಿವಾಸಿ ಹುಸೈನ್ (41) ಆರೋಪಿಯಾಗಿದ್ದಾನೆ.
ಜ.14ರಂದು ದೇರಳಕಟ್ಟೆಯ ಅಸೈಗೋಳಿಯಿಂದ ಮಂಗಳೂರಿಗೆ ಮಹೇಶ್ ಬಸ್ಸಿನಲ್ಲಿ ಬರುತ್ತಿದ್ದ ವೇಳೆ, ಕೆ.ಎಸ್.ಹೆಗ್ಡೆ ಆಸ್ಪತ್ರೆ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ್ದ ಯುವಕನೊಬ್ಬ ತನಗೆ ಕಿರುಕುಳ ನೀಡಿದ್ದಾಗಿ ತಸ್ಲಿಮಾ ನಸ್ರೀನ್ ಎಂಬ ಯುವತಿ ತನ್ನ ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಬರೆದು ಆತನ ಫೋಟೋ ಅಪ್ಲೋಡ್ ಮಾಡಿದ್ದಳು. ಬಸ್ಸಿನಲ್ಲಿ ನಿರಂತರ ಕಿರುಕುಳ ನೀಡಿದ್ದು ಆ ಬಗ್ಗೆ ಕಿರುಚಾಡಿದರೂ ಬಸ್ ಸಿಬಂದಿಯಾಗಲೀ, ಇತರೇ ಪ್ರಯಾಣಿಕರಾಗಲೀ ಸ್ಪಂದನೆ ನೀಡಿರಲಿಲ್ಲ ಎಂದು ನೋವು ತೋಡಿಕೊಂಡಿದ್ದಳು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.




ಆಬಳಿಕ ಸ್ವತಃ ಮಂಗಳೂರು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಮ್ ಶಂಕರ್, ಆಕೆಯನ್ನು ಸಂಪರ್ಕಿಸಿ ಆರೋಪಿಯನ್ನು ಬಂಧಿಸುವುದಾಗಿ ಹೇಳಿದ್ದಲ್ಲದೆ, ಈ ಬಗ್ಗೆ ಪೊಲೀಸ್ ದೂರು ನೀಡುವಂತೆ ಕೇಳಿಕೊಂಡಿದ್ದರು. ಅದರಂತೆ, ಯುವತಿ ತನ್ನ ಆಪ್ತರ ಜೊತೆ ಮಂಗಳೂರಿನ ಮಹಿಳಾ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದರು. ಯುವತಿ ಆರೋಪಿಯ ಫೋಟೋ ಷೇರ್ ಮಾಡಿದ್ದರಿಂದ, ಪೊಲೀಸರು ಸುಲಭದಲ್ಲಿ ಟ್ರೇಸ್ ಮಾಡಿದ್ದಾರೆ.
ಆರೋಪಿ ಹುಸೈನ್ ನನ್ನು ಹಿಡಿದು ಕಮಿಷನರ್ ಕಚೇರಿಗೆ ತಂದಿದ್ದ ಪೊಲೀಸರು, ಬಳಿಕ ಸಂತ್ರಸ್ತ ಯುವತಿಯನ್ನೂ ಕರೆಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಬಳಿಕ ಸುದ್ದಿಗೋಷ್ಠಿ ಕರೆದು ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಲ್ಲದೆ ಆರೋಪಿಯನ್ನು ಮಾಧ್ಯಮದ ಮುಂದೆ ತೋರಿಸಿದ್ದಾರೆ.


ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕಮಿಷನರ್ ಶಶಿಕುಮಾರ್, ಇಂಥ ಪ್ರಕರಣದಲ್ಲಿ ಯುವತಿಯೇ ಆರೋಪಿಯ ಫೋಟೋ ತೆಗೆದು ಕಿರುಕುಳದ ಬಗ್ಗೆ ಹೇಳಿಕೊಂಡಿದ್ದರಿಂದ ಪೊಲೀಸರಿಗೆ ಪತ್ತೆ ಮಾಡಲು ಸಾಧ್ಯವಾಗಿದೆ. ಇಲ್ಲದಿದ್ದರೆ ಸಾಧ್ಯವಾಗುತ್ತಿರಲಿಲ್ಲ. ಈ ಬಗ್ಗೆ ಯುವತಿಯನ್ನು ಅಭಿನಂದಿಸುವುದಾಗಿ ಹೇಳಿದರು. ಅಲ್ಲದೆ, ಸಮಾಜಕ್ಕೆ ಪ್ರೇರಣೆಯಾಗುವಂತೆ ವರ್ತಿಸಿದ ಯುವತಿಯನ್ನು ಶಾಲು ಹೊದಿಸಿ ಸನ್ಮಾನಿಸಿದರು.
ನಿರ್ಭಯಾ ಪ್ರಕರಣದ ಬಳಿಕ ಸಾರ್ವಜನಿಕ ಸಾರಿಗೆ ಬಸ್ ಗಳಲ್ಲಿ ಸಿಸಿಟಿವಿ ಹಾಕುವಂತೆ ನಿರ್ದೇಶನ ನೀಡಲಾಗಿದೆ. ಆದರೆ, ಅದಿನ್ನೂ ನಮ್ಮಲ್ಲಿ ಅನುಷ್ಠಾನಕ್ಕೆ ಬಂದಿಲ್ಲ. ಬೆಂಗಳೂರಿನ ಕೆಲವು ಬಸ್ ಗಳಲ್ಲಿ ಮತ್ತು ಕಾಲೇಜು, ಶಾಲಾ ಬಸ್ ಗಳಲ್ಲಿ ಮಾತ್ರ ಸಿಸಿಟಿವಿ ಅಳವಡಿಸಲಾಗಿದೆ. ಮಂಗಳೂರಿನಲ್ಲಿಯೂ ಎಲ್ಲ ಬಸ್ ಗಳಿಗೂ ಸಿಸಿಟಿವಿ ಅಳವಡಿಸುವ ಬಗ್ಗೆ ಜಿಲ್ಲಾಧಿಕಾರಿಯ ಜೊತೆ ಮಾತನಾಡುತ್ತೇನೆ ಎಂದು ಕಮಿಷನರ್ ತಿಳಿಸಿದರು.
ಅಲ್ಲದೆ, ಯುವತಿಗೆ ಕಿರುಕುಳ ನೀಡಿದ ಸಂದರ್ಭದಲ್ಲಿ ಬಸ್ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಈ ಬಗ್ಗೆ ಬಸ್ ಸಿಬಂದಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸುವಂತೆ ಪೊಲೀಸರಿಗೆ ಸೂಚಿಸುತ್ತೇನೆ ಎಂದು ಹೇಳಿದರು.
ಸುದ್ದಿಗೋಷ್ಠಿಯ ಬಳಿಕ ಆರೋಪಿ ಹುಸೈನನ್ನು ಮಾಧ್ಯಮದ ಮುಂದೆ ಕರೆಸಿದಾಗ, ಅಲ್ಲಿಯೇ ಕುಳಿತಿದ್ದ ಯುವತಿ ಸಿಟ್ಟಿನಲ್ಲಿ ಪೊಲೀಸರ ಎದುರೇ ಆತನ ಕಪಾಳಕ್ಕೆ ಒಂದೇಟು ಹೊಡೆದಿದ್ದು ವಿಶೇಷವಾಗಿತ್ತು. ಯುವತಿಗೆ ಪೊಲೀಸ್ ದೂರು ನೀಡಲು ನೆರವಾಗಿದ್ದ ಅಲೋಶಿಯಸ್ ಕಾಲೇಜಿನ ಉದ್ಯೋಗಿ, ಸಾಮಾಜಿಕ ಕಾರ್ಯಕರ್ತೆ ಡಾ.ವಿದ್ಯಾ ಡಿಸೋಜ ಉಪಸ್ಥಿತರಿದ್ದರು.
Read: ಖಾಸಗಿ ಬಸ್ಸಿನಲ್ಲಿ ಕಿಡಿಗೇಡಿಯ ಕಿರುಕುಳ ; ಮುಸ್ಲಿಂ ಯುವತಿಯ ಪೋಸ್ಟ್ ವೈರಲ್ !!
Video:
Police have arrested Hussain from Kasargod in connection to sexual harassment of Muslim women on a bus in Mangalore on her way from KS Hegde to Pumpwell. The Woman also slapped the accused before the officers.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm