ಬ್ರೇಕಿಂಗ್ ನ್ಯೂಸ್
21-01-21 07:58 pm Mangaluru Correspondent ಕರಾವಳಿ
ಪುಣೆ, ಜನವರಿ 21: ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.
ಪುಣೆಯ ಮಂಜಿರಿ ಪ್ರದೇಶದಲ್ಲಿರುವ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಎನ್ ಡಿಆರ್ ಎಫ್ ತಂಡವೂ ಕಾರ್ಯಾಚರಣೆಗೆ ಧಾವಿಸಿದೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಸುಮಾರು ನೂರು ಎಕರೆ ಆವರಣದಲ್ಲಿ ಸಂಸ್ಥೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕಕ್ಕೆ ಈ ಕಟ್ಟಡ ಹೊಂದಿಕೊಂಡಿದೆ. ಸುಮಾರು ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದು, ಮೂರು ಮಂದಿಯನ್ನು ರಕ್ಷಿಸಿರುವುದಾಗಿ ಅಗ್ನಿ ಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡ ಕೊರೊನಾ ಲಸಿಕೆ ಉತ್ಪಾದನೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಲಸಿಕೆಗಳು ಹಾಗೂ ಲಸಿಕಾ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಅವಘಡದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪುಣೆ ನಗರ ಆಯುಕ್ತರಿಂದ ಸಂಪೂರ್ಣ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
A major fire broke out at a chemical solvent manufacturing unit in Maharashtra’s Pune district in the wee hours of Thursday killing five a fire brigade official said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm