ಬ್ರೇಕಿಂಗ್ ನ್ಯೂಸ್
21-01-21 07:58 pm Mangaluru Correspondent ಕರಾವಳಿ
ಪುಣೆ, ಜನವರಿ 21: ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.
ಪುಣೆಯ ಮಂಜಿರಿ ಪ್ರದೇಶದಲ್ಲಿರುವ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಎನ್ ಡಿಆರ್ ಎಫ್ ತಂಡವೂ ಕಾರ್ಯಾಚರಣೆಗೆ ಧಾವಿಸಿದೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಸುಮಾರು ನೂರು ಎಕರೆ ಆವರಣದಲ್ಲಿ ಸಂಸ್ಥೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕಕ್ಕೆ ಈ ಕಟ್ಟಡ ಹೊಂದಿಕೊಂಡಿದೆ. ಸುಮಾರು ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದು, ಮೂರು ಮಂದಿಯನ್ನು ರಕ್ಷಿಸಿರುವುದಾಗಿ ಅಗ್ನಿ ಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡ ಕೊರೊನಾ ಲಸಿಕೆ ಉತ್ಪಾದನೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಲಸಿಕೆಗಳು ಹಾಗೂ ಲಸಿಕಾ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಅವಘಡದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪುಣೆ ನಗರ ಆಯುಕ್ತರಿಂದ ಸಂಪೂರ್ಣ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
A major fire broke out at a chemical solvent manufacturing unit in Maharashtra’s Pune district in the wee hours of Thursday killing five a fire brigade official said.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm