ಬ್ರೇಕಿಂಗ್ ನ್ಯೂಸ್
21-01-21 07:58 pm Mangaluru Correspondent ಕರಾವಳಿ
ಪುಣೆ, ಜನವರಿ 21: ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಇಂದು ಮಧ್ಯಾಹ್ನದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ.
ಪುಣೆಯ ಮಂಜಿರಿ ಪ್ರದೇಶದಲ್ಲಿರುವ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಎನ್ ಡಿಆರ್ ಎಫ್ ತಂಡವೂ ಕಾರ್ಯಾಚರಣೆಗೆ ಧಾವಿಸಿದೆ. ಆಕ್ಸ್ ಫರ್ಡ್ ಆಸ್ಟ್ರಾಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ ಸ್ಟಿಟ್ಯೂಟ್ ನಲ್ಲಿ ಉತ್ಪಾದನೆ ಮಾಡಲಾಗುತ್ತಿದೆ. ಸುಮಾರು ನೂರು ಎಕರೆ ಆವರಣದಲ್ಲಿ ಸಂಸ್ಥೆ ನಿರ್ಮಾಣವಾಗುತ್ತಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡಿರುವ ಈ ಕಟ್ಟಡದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆ ಉತ್ಪಾದನೆ ನಡೆಯುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಲಸಿಕೆ ಉತ್ಪಾದನೆ ಮಾಡುತ್ತಿರುವ ಘಟಕಕ್ಕೆ ಈ ಕಟ್ಟಡ ಹೊಂದಿಕೊಂಡಿದೆ. ಸುಮಾರು ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದು, ಮೂರು ಮಂದಿಯನ್ನು ರಕ್ಷಿಸಿರುವುದಾಗಿ ಅಗ್ನಿ ಶಾಮಕ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದಟ್ಟ ಹೊಗೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡ ಕೊರೊನಾ ಲಸಿಕೆ ಉತ್ಪಾದನೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಲಸಿಕೆಗಳು ಹಾಗೂ ಲಸಿಕಾ ಉತ್ಪಾದನಾ ಘಟಕಕ್ಕೆ ಯಾವುದೇ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಅವಘಡದ ಕುರಿತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪುಣೆ ನಗರ ಆಯುಕ್ತರಿಂದ ಸಂಪೂರ್ಣ ವಿವರ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.
A major fire broke out at a chemical solvent manufacturing unit in Maharashtra’s Pune district in the wee hours of Thursday killing five a fire brigade official said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm