ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
10-08-26 11:09 am
HK News Staffer
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm