ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.

ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm