ಬ್ರೇಕಿಂಗ್ ನ್ಯೂಸ್
22-01-21 10:39 am Mangalore Correspondent ಕರಾವಳಿ
ಮಂಗಳೂರು, ಜ.22 : ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ಹಾವಳಿಯಿಂದಾಗಿ ಬಿ ಫಾರ್ಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜನ್ನೇ ತೊರೆದು ಪೊಲೀಸ್ ದೂರು ದಾಖಲಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರಿನ ವಳಚಿಲ್ನಲ್ಲಿರುವ ಶ್ರೀನಿವಾಸ ಕಾಲೇಜಿನಲ್ಲಿ ಮೊದಲ ವರ್ಷದ ಬಿ ಫಾರ್ಮಸಿ ಕಲಿಯುತ್ತಿರುವ ವಿದ್ಯಾರ್ಥಿ ರ್ಯಾಗಿಂಗ್ ಹಿನ್ನೆಲೆಯಲ್ಲಿ ಕಾಲೇಜು ತೊರೆಯಲು ನಿರ್ಧರಿಸಿದ್ದಾನೆ. ಈತ ಜ.10 ರಂದು ತರಗತಿ ಮುಗಿಸಿ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿದ್ದು ಕಾಲೇಜಿಗೆ ಬರುವಾಗ ತಲೆಕೂದಲು ಹಾಗೂ ಮೀಸೆ ತೆಗೆದು ಬರಬೇಕೆಂದು ಬೆದರಿಸಿದ್ದಾರೆ. ಅದೇ ವೇಳೆ ಒಬ್ಬ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ. ಜ.12 ರಂದು ಅದೇ ವಿದ್ಯಾರ್ಥಿಗಳು ಮತ್ತೆ ಅಡ್ಡಗಟ್ಟಿ ಮೀಸೆ ಹಾಗೂ ತಲೆಕೂದಲು ತೆಗೆಯದೇ ಬಂದ ಕಾರಣಕ್ಕೆ ಬೈದಿದ್ದಾರೆ. ನಾಳೆ ಕಾಲೇಜಿಗೆ ಬರುವಾಗ ಮೀಸೆ ಹಾಗೂ ತಲೆ ಕೂದಲು ತೆಗೆಯದೇ ಬಂದಲ್ಲಿ ಕೂದಲನ್ನು ಕತ್ತರಿಸುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆಯೂ ಓರ್ವ ವಿದ್ಯಾರ್ಥಿ ಕೆನ್ನೆಗೆ ಹೊಡೆದಿದ್ದಾನೆ.
ಭಯಗೊಂಡ ವಿದ್ಯಾರ್ಥಿ ಹಾಸ್ಟೆಲ್ಗೆ ಬಂದು ಮನೆಯವರಿಗೆ ಮಾಹಿತಿ ನೀಡಿದ್ದು, ಮನೆಯವರು ಅದೇ ದಿನ ಬಂದು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಗ್ಗೆ ಸಂಬಂಧಿಕರಲ್ಲಿ ಚರ್ಚಿಸಿದ ಬಳಿಕ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅಸಾಧ್ಯವಾಗಿರುವುದರಿಂದ ಕಾಲೇಜಿಗೆ ನೀಡಿರುವ SSLC, PUC ಸರ್ಟಿಫಿಕೇಟ್, ಟಿಸಿ ಮತ್ತು1,63,000 ಹಣವನ್ನು ಹಿಂದಿರುಗಿಸಲು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
A ragging case has been reported at Srinivas college at Valachil in Mangalore. The student has discontinued his studies.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm