ಬ್ರೇಕಿಂಗ್ ನ್ಯೂಸ್
22-01-21 03:54 pm Mangalore Correspondent ಕರಾವಳಿ
ಮಂಗಳೂರು, ಜ.22: ನಗರದ ಫಾರ್ಮಸಿ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ವಳಚ್ಚಿಲ್ ನಲ್ಲಿರುವ ಶ್ರೀನಿವಾಸ್ ಕಾಲೇಜಿನ ಮೊದಲ ವರ್ಷದ ಬಿ- ಫಾರ್ಮಾ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ರ್ಯಾಗಿಂಗ್ ಗೆ ಒಳಗಾಗಿದ್ದು, ಅದೇ ಕಾಲೇಜಿನ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದಾರೆ. ಆರೋಪಿಗಳೆಲ್ಲರೂ ಕೇರಳದ ಮಲಪ್ಪುರಂ, ಕಣ್ಣೂರು ಮೂಲದ ವಿದ್ಯಾರ್ಥಿಗಳಾಗಿದ್ದು ಐಪಿಸಿ ಮತ್ತು ಕರ್ನಾಟಕ ಎಜುಕೇಶನ್ ಏಕ್ಟ್ ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ತೃತೀಯ ಬಿ ಫಾರ್ಮಾದ ಜಿಷ್ಣು(20), ಶ್ರೀಕಾಂತ ಪಿ.ವಿ. (20), ಅಶ್ವಂತ್ (20), ಸಯಂತ್ (22), ಅಭಿರತ್ ರಾಜೀವ್ (21), ದ್ವಿತೀಯ ಬಿ ಫಾರ್ಮಾದ ರಾಹುಲ್ ಪಿ. (21), ಜಿಷ್ಣು (20), ಮುಕ್ತಾರ್ ಅಲಿ (19), ಮುಹಮ್ಮದ್ ರಝೀಮ್ ಕೆ. (20) ಬಂಧಿತರು. ಕಿರಿಯ ವಿದ್ಯಾರ್ಥಿ ಜ.10ರಂದು ತರಗತಿ ಮುಗಿಸಿ ಮಧ್ಯಾಹ್ನ ಹಾಸ್ಟೆಲ್ ಕಡೆಗೆ ಹೋಗುತ್ತಿದ್ದ ವೇಳೆ, ಹಿರಿಯ ವಿದ್ಯಾರ್ಥಿಗಳು ಅಡ್ಡಗಟ್ಟಿ ತಲೆಕೂದಲು ಹಾಗೂ ಮೀಸೆ ತೆಗೆಸಿ ಬರುವಂತೆ ಗದರಿಸಿದ್ದಲ್ಲದೆ, ಓರ್ವ ಕೆನ್ನೆಗೆ ಬಾರಿಸಿದ್ದಾನೆ. ನಂತರ ಜ. 12ರಂದು ಅಪರಾಹ್ನ ಅದೇ ವಿದ್ಯಾರ್ಥಿಗಳು ಮೀಸೆ ಹಾಗೂ ತಲೆ ಕೂದಲು ತೆಗೆಯದೆ ಬಂದ ಕಾರಣ ಬೈದು, ಮೀಸೆ ತಲೆ ಕೂದಲು ತೆಗೆಯದಿದ್ದರೆ ತಾವೇ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದರು. ಆನಂತರ ಮೀಸೆ ಮತ್ತು ಕೂದಲನ್ನು ತೆಗೆದು ಹೋಗಿದ್ದ ವಿದ್ಯಾರ್ಥಿಯಲ್ಲಿ ಎಲ್ಲ ಹಿರಿಯ ವಿದ್ಯಾರ್ಥಿಗಳ ಹೆಸರು ಬರೆದು ತರುವಂತೆ ಹೊಸ ಬೇಡಿಕೆ ಇಟ್ಟಿದ್ದಾರೆ. ಮರುದಿನ ಹೇಗೂ ಹೆಸರನ್ನೂ ಬರೆದು ತಂದಿದ್ದು ಹೆಸರಿನ ಜೊತೆಗೆ ಅಣ್ಣ ಅಂತ ಬರೆದಿಲ್ಲ ಅಂತ ಕಿರಿಕ್ ಮಾಡಿದ್ದರು. ಇದರ ನಡುವೆ, ದಾರಿಯಲ್ಲಿ ಸಿಕ್ಕಾಗೆಲ್ಲ ಕೀಟಲೆ ಮಾಡಿದ್ದರಿಂದ ಬೇಸತ್ತ ವಿದ್ಯಾರ್ಥಿ ತನ್ನ ಮನೆಯವರಿಗೆ ಹೇಳಿ, ಪೊಲೀಸ್ ದೂರು ನೀಡಿದ್ದ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರ್ಯಾಗಿಂಗ್ ಒಳಗಾಗಿರುವ ವಿದ್ಯಾರ್ಥಿಯನ್ನು ಸುಮಾರು 2 ಲಕ್ಷ ರೂ. ಶುಲ್ಕ ಪಾವತಿಸಿ ಕಾಲೇಜು ಹಾಸ್ಟೆಲ್ ಸೇರಿಸಲಾಗಿತ್ತು. ಅದನ್ನು ಹಿಂಪಡೆಯಲು ಆತನ ಪೋಷಕರು ಡಿಸಿಪಿಗೆ ತಿಳಿಸಿದ್ದು ಸಂಬಂಧಪಟ್ಟ ಕಾಲೇಜಿನ ಆಡಳಿತ ಶುಲ್ಕ ಹಿಂತಿರುಗಿಸಲು ಒಪ್ಪಿಗೆ ನೀಡಿದೆ. ಈತನ ಜೊತೆಗೆ ಇನ್ನೊಬ್ಬ ಕಿರಿಯ ವಿದ್ಯಾರ್ಥಿಯೂ ಕಿರುಕುಳ ಅನುಭವಿಸಿದ್ದು ಅನುಚಿತವಾಗಿ ನಡೆಸಿಕೊಂಡು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕಮಿಷನರ್ ಹೇಳಿದರು.
ರ್ಯಾಗಿಂಗ್ ಬಗ್ಗೆ ಆಯಾ ಸಂಸ್ಥೆಗಳೇ ಹೊಣೆ
ಮಂಗಳೂರಿಗೆ ದೇಶ- ವಿದೇಶದ ವಿದ್ಯಾರ್ಥಿಗಳು ಬರುತ್ತಿದ್ದು ಶಿಕ್ಷಣ ಕಾಶಿಯೆಂದೇ ಗುರುತಿಸಲ್ಪಟ್ಟಿದೆ. ಇಂಥ ಜಾಗದಲ್ಲಿ ಕಾಲೇಜು ವ್ಯಾಪ್ತಿಯಲ್ಲಿ ರ್ಯಾಗಿಂಗ್ ನಡೆಯದಂತೆ ಆಯಾ ಶಿಕ್ಷಣ ಸಂಸ್ಥೆಗಳೇ ಎಚ್ಚರಿಕೆ ವಹಿಸಬೇಕು. ತಮ್ಮ ಸಂಸ್ಥೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಅವರ ಸುರಕ್ಷತೆ ಬಗ್ಗೆ ಖಾತರಿಪಡಿಸಬೇಕು. ರ್ಯಾಗಿಂಗ್ ಸಂಬಂಧಿಸಿ ಶಿಕ್ಷಣ ಸಂಸ್ಥೆಗಳು ಯಾವುದೇ ರೀತಿ ಅಸಹಾಯಕತೆ ಪ್ರದರ್ಶಿಸಿದರೆ, ಕಾನೂನು ಪ್ರಕಾರ ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಎಚ್ಚರಿಕೆ ನೀಡಿದರು.
ಈ ರೀತಿಯ ರ್ಯಾಗಿಂಗ್ ಪ್ರಕರಣಗಳು ನಡೆದರೆ ಅದಕ್ಕೆ ಸಂಸ್ಥೆಗಳೂ ಜವಾಬ್ದಾರಿಯಾಗುತ್ತವೆ. ಕಿರಿಯ ವಿದ್ಯಾರ್ಥಿಗಳು ಕಿರುಕುಳ ನಡೆದಾಗ ದೂರು ನೀಡಲು ಹಿಂಜರಿಯುತ್ತಾರೆ. ಹಾಗಾಗಿ ತಮ್ಮ ಸಂಸ್ಥೆಗೆ ದಾಖಲಾದ ವಿದ್ಯಾರ್ಥಿಗಳ ಸುರಕ್ಷತೆ ಕಾಯ್ದುಕೊಳ್ಳುವುದು ಆಯಾ ಶಿಕ್ಷಣ ಸಂಸ್ಥೆಗಳ ಕರ್ತವ್ಯ ಎಂದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್ ಉಪಸ್ಥಿತರಿದ್ದರು.
ರ್ಯಾಗಿಂಗ್ ; ಕಾಲೇಜನ್ನೇ ತೊರೆದ ಬಿ ಫಾರ್ಮಾ ವಿದ್ಯಾರ್ಥಿ, ಫೀಸ್ ಹಿಂತಿರುಗಿಸುವಂತೆ ಪೊಲೀಸ್ ದೂರು
(1/2)Mangalore City Police has arrested 9 individuals who were involved in ragging 1st year student at Srinivas College of Pharmacy.Accused booked under Karnataka Education Act and IPC. pic.twitter.com/yPmjAnlI75
— N. Shashi Kumar CP Mangaluru City (@compolmlr) January 22, 2021
In connection to ragging Nine students of Srinivas College of Valachil have been arrested by Kankandy Rural Police Station.
13-05-24 05:57 pm
Bangalore Correspondent
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಅಸಮಾಧ...
12-05-24 07:08 pm
13-05-24 03:53 pm
HK News Desk
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
13-05-24 07:27 pm
Udupi Correspondent
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
Kadaba illegal sand raid, Mangalore crime: ಕಡ...
12-05-24 04:34 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm