ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.
ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am