ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.

ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm