ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.
ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm