ಬ್ರೇಕಿಂಗ್ ನ್ಯೂಸ್
23-01-21 11:55 am Mangalore Correspondent ಕರಾವಳಿ
ಸುಬ್ರಮಣ್ಯ, ಜ.23 : ಮುಜರಾಯಿ ದೇಗುಲಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಾಹಿತಿ ನೀಡಿದರು. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ, ಪರಂಪರೆಗೆ ಅನುಗುಣವಾಗಿ ಸಪ್ತಪದಿ ಕಾರ್ಯಕ್ರಮ ನಡೆಸಲಾಗುವುದು. ಯಾವುದೇ ದೇವಸ್ಥಾನದವರು ಅಥವಾ ಜಿಲ್ಲೆಯವರು ಮುಂದೆ ಬಂದರೆ ಅವರು ಹೇಳಿದ ದಿನಾಂಕದಂದೇ ಸಪ್ತಪದಿ ಕಾರ್ಯಕ್ರಮ ನಡೆಸಲು ಅವಕಾಶ ಮಾಡಲಾಗುವುದು ಎಂದರು.

ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸುಮಾರು 206 ಎ ದರ್ಜೆ ದೇವಾಲಯಗಳು ಮತ್ತು ಸುಮಾರು 310 ಬಿ ದರ್ಜೆ ದೇವಾಲಯಗಳಿವೆ. ರಾಜ್ಯ ಧಾರ್ಮಿಕ ಪರಿಷತ್ ಮೂಲಕ ಈಗಾಗಲೇ 80 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಅರ್ಜಿ ಕರೆಯಲಾಗಿತ್ತು. ಅದರಲ್ಲಿ ಸುಮಾರು 11 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಯಾಗಿ, ಆಡಳಿತ ನಡೆಸುತ್ತಿದೆ.
ಪೊಲೀಸ್ ವರದಿ ಬಾಕಿಯಿರುವ ದೇವಾಲಯಗಳು ಮಾತ್ರ ವ್ಯವಸ್ಥಾಪನಾ ಸಮಿತಿ ರಚನೆಗೆ ಬಾಕಿಯಾಗಿದೆ. ಇಂದಿನ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈಗಾಗಲೇ ಅವಧಿ ಮುಗಿದಿರುವ ದೇವಾಲಯಗಳಿಗೆ ಶೀಘ್ರ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಕರೆಯಲು ನಿರ್ಧರಿಸಲಾಗಿದೆ ಎಂದರು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am