ಬ್ರೇಕಿಂಗ್ ನ್ಯೂಸ್
23-01-21 03:31 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆ ಸಮೀಪ ವಾಹನ ಸವಾರರು ತ್ಯಾಜ್ಯ ಎಸೆಯುವ ಜಾಗದಲ್ಲಿ ಹಸಿರು ದಳ ಸಂಸ್ಥೆಯ ಸದಸ್ಯರು ಜಾಗೃತಿ ಮೂಡಿಸುವ ಕಾರ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಶಾಸಕ ಕಾಮತ್ ಅವರು, ನೇತ್ರಾವತಿ ಸೇತುವೆಯ ಬಳಿ ಖಾಲಿ ಜಾಗದಲ್ಲಿ ಪ್ರತಿನಿತ್ಯ ವಾಹನ ಸವಾರರು ಕಸ ಎಸೆದು ಹೋಗುವ ಕುರಿತು ಮಾಹಿತಿ ನೀಡಿದ್ದರು. ಹಲವಾರು ಬಾರಿ ಸ್ಥಳವನ್ನು ಸ್ವಚ್ಛಗೊಳಿಸಿದರು ತ್ಯಾಜ್ಯ ಎಸೆಯುವುದು ನಿಂತಿರಲಿಲ್ಲ. ಇತ್ತೀಚೆಗೆ ಕಳೆದ ಕೆಲ ಸಮಯದಿಂದ ಹಸಿರು ದಳ ಸಂಸ್ಥೆಯ ಸದಸ್ಯರು ಈ ಜಾಗದಲ್ಲಿ ಪ್ಲೆಕಾರ್ಡ್ ಹಿಡಿದು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದು ಶಾಸಕ ಕಾಮತ್ ಹೇಳಿದರು.

ಸ್ವಚ್ಚತಾ ಕಾರ್ಯಗಳು ಸೀಮಿತ ಸಂಸ್ಥೆಗಳು ಅಥವಾ ವ್ಯಕ್ತಿಯಿಂದ ಆಗುವಂತದ್ದಲ್ಲ. ಪ್ರತಿಯೊಬ್ಬ ನಾಗರಿಕರಿಗೂ ತನ್ನದೇ ಆದ ಜವಬ್ದಾರಿಗಳಿರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ತ್ಯಾಜ್ಯಗಳನ್ನು ಎಸೆಯುವುದರಿಂದ ವಿವಿಧ ಸಮಸ್ಯೆಗಳು ತಲೆದೋರುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಚ್ಚತೆಯ ನಿಟ್ಟಿನಲ್ಲಿ ಚಿಂತಿಸಬೇಕು. ಆ ಮೂಲಕ ಸ್ವಚ್ಛ ಭಾರತದ ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ಶಾಸಕ ಕಾಮತ್ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಬಿಜೆಪಿ ಪ್ರಮುಖರಾದ ಸುರೇಂದ್ರ ಜೆಪ್ಪಿನಮೊಗರು, ಹಸಿರು ದಳ ಸಂಸ್ಥೆಯ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am