ಬ್ರೇಕಿಂಗ್ ನ್ಯೂಸ್
23-01-21 04:21 pm Mangalore Correspondent ಕರಾವಳಿ
ಮಂಗಳೂರು, ಜ.23 : ಸಿಎಂ ತವರು ಜಿಲ್ಲೆಯಲ್ಲೇ ಅಕ್ರಮ ಗಣಿಗಾರಿಕೆ ಕಂಡುಬಂದಿದ್ದಲ್ಲದೆ, ಭಾರೀ ಸ್ಫೋಟ ಆಗಿರುವುದು ಅಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಶಂಕೆ ಮೂಡಿಸಿದೆ. ಪೊಲೀಸರು ಜನ ಸಾಮಾನ್ಯರ ಮರಳು ಗಾಡಿಯನ್ನು ವಶ ಪಡಿಸಿಕೊಳ್ಳತ್ತಾರೆ. ಯಾಕೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಟ ಮಾಡುವವರನ್ನ ಹಿಡಿಯಲ್ಲಾ.. ಇದು ಅಲ್ಲಿನ ಗಣಿ ಇಲಾಖೆ ಅಧಿಕಾರಿಗಳಿಗೆ ಗೊತ್ತಿರಲಿಲ್ಲವೇ ? ಸಂಬಂಧಪಟ್ಟ ಗಣಿ ಇಲಾಖೆ ಅಧಿಕಾರಿಗಳನ್ನ ಕೂಡಲೇ ಸಂಸ್ಪೆಂಡ್ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಸ್ಫೋಟ ಘಟನೆಯಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಅಕ್ರಮ ಎಂದು ಗೊತ್ತಿದ್ದರೂ ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿತ್ತು. ಇದರಲ್ಲಿ ಯಾರೆಲ್ಲಾ ಶಾಮೀಲಾತಿ ಇದ್ದಾರೆ ಜನರಿಗೆ ಗೊತ್ತಾಗಬೇಕು. ಈ ಘಟನೆಯಿಂದ ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯ ಜನರ ಜೀವನದ ಮೇಲೆ ಪರಿಣಾಮ ಬೀರಲಿದೆ. ಆಸುಪಾಸಿನಲ್ಲಿ ಮನೆ ಹಾಳಾದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಅರ್ನಾಬ್ ವಿರುದ್ಧ ಕ್ರಮಕ್ಕೆ ಆಗ್ರಹ
ದೇಶದ ರಕ್ಷಣೆ ಉದ್ದೇಶದಿಂದ ಭದ್ರತಾ ವಿಷಯ ಗೌಪ್ಯವಾಗಿರಬೇಕು. ಆದರೆ, ರಿಪಬ್ಲಿಕ್ ಟಿವಿ ಮುಖ್ಯಸ್ಥರು ಹೀನ ಕೃತ್ಯದಲ್ಲಿ ತೊಡಗಿದ್ದಾರೆ. ದೇಶದ ಭದ್ರತೆ ವಿಚಾರವನ್ನು ಅಧಿಕಾರಿಗಳು ಸೋರಿಕೆ ಮಾಡಿದ್ದಾರೆ. ಹೀನ ಕೃತ್ಯದ ಹೊಣೆಯನ್ನ ನೇರವಾಗಿ ಪ್ರಧಾನ ಮಂತ್ರಿ ಹೊರಬೇಕು. ಘಟನೆ ಬಗ್ಗೆ ಸದನ ಸಮಿತಿಯಿಂದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ್ ಹೇಳಿದ್ದಾರೆ.

ಅರ್ನಾಬ್ ಗೋಸ್ವಾಮಿಯ ವಾಟ್ಸಪ್ ಚಾಟ್ ನೋಡಿದರೆ ಸಂಪೂರ್ಣವಾಗಿ ಅರ್ಥವಾಗುತ್ತೆ. ಇದು ಒಂದು ದೇಶದೋಹ್ರದ ಕೃತ್ಯವೆಂದು ತಿಳಿದುಬರುತ್ತದೆ. ಇದರಿಂದ ಪುಲ್ವಾಮ ದಾಳಿಯ ಕೃತ್ಯ ಮೊದಲೇ ನಿರ್ಧಾರವಾಗಿತ್ತಾ ಎನ್ನುವ ಸಂಶಯ ಕಾಡುವಂತಾಗಿದೆ. ರಾಜಕೀಯ ದುರುದ್ದೇಶದಿಂದ ಈ ದಾಳಿ ನಡೆಸಿದ್ದಾರೆಯೇ ಎನ್ನುವ ಶಂಕೆ ಮೂಡುತ್ತಿದೆ. ಅರ್ನಾಬ್ ಗೋಸ್ವಾಮಿಯ ವಾಹಿನಿ TRP ಗಾಗಿ ಈ ಕೃತ್ಯ ನಡೆಸಿದೆ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕಿಲ್ಲ. ದೇಶದ್ರೋಹಿ ಕೃತ್ಯದಲ್ಲಿ ತೊಡಗಿರುವ ಅರ್ನಾಬ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am