ಬ್ರೇಕಿಂಗ್ ನ್ಯೂಸ್
23-01-21 05:29 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಕಮಿಷನರ್, ಮಂಗಳೂರಿನಲ್ಲಿ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳ ಹುಂಡಿಯಲ್ಲಿ ಅನುಚಿತ ವಸ್ತುಗಳು ಹಾಗೂ ಅಸಹ್ಯಕರ ರೀತಿಯಲ್ಲಿ ಬರೆದ ಕಾಗದಗಳನ್ನು ಹಾಕಿದ್ದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದರು.
ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರು ತಕ್ಷಣ ಇದನ್ನು ನಿಲ್ಲಿಸಬೇಕು. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಶೀಘ್ರ ಮಾಡಲಿದ್ದೇವೆ. ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು ಇರಬಹುದು, ಅಲ್ಲಿನ ಆಡಳಿತ ಸಮಿತಿ ಇಂತಹ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು. ಸೂಕ್ತವಾದ ಭದ್ರತಾ ವ್ಯವಸ್ಥೆ ನಿಯೋಜಿಸುವ ಕಾರ್ಯ ಮಾಡಬೇಕೆಂದು ಕಮಿಷನರ್ ಮನವಿ ಮಾಡಿದರು.
ಸಾರ್ವಜನಿಕರು ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಅಥವಾ ನೇರವಾಗಿ ನನಗೂ ಮಾಹಿತಿ ನೀಡಬಹುದು. ಈ ಮೂಲಕ ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ದೂರವಾಣಿ ಸಂಖ್ಯೆ 9480802300ಗೆ ವಾಟ್ಸ್ ಆ್ಯಪ್ ಅಥವಾ ಮೆಸೇಜ್ ಮೂಲಕ ತಿಳಿಸಬಹುದು ಎಂದು ಪೊಲೀಸ್ ಕಮಿಷನರ್ ವಿನಂತಿಸಿಕೊಂಡರು.
(1/2)Appeal to people of Mangaluru Commisionerate to share information regarding any untoward developments in your neighborhood. pic.twitter.com/DvWTMB3PUz
— N. Shashi Kumar CP Mangaluru City (@compolmlr) January 23, 2021
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm