ಬ್ರೇಕಿಂಗ್ ನ್ಯೂಸ್
23-01-21 05:29 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಕಮಿಷನರ್, ಮಂಗಳೂರಿನಲ್ಲಿ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳ ಹುಂಡಿಯಲ್ಲಿ ಅನುಚಿತ ವಸ್ತುಗಳು ಹಾಗೂ ಅಸಹ್ಯಕರ ರೀತಿಯಲ್ಲಿ ಬರೆದ ಕಾಗದಗಳನ್ನು ಹಾಕಿದ್ದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದರು.
ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರು ತಕ್ಷಣ ಇದನ್ನು ನಿಲ್ಲಿಸಬೇಕು. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಶೀಘ್ರ ಮಾಡಲಿದ್ದೇವೆ. ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು ಇರಬಹುದು, ಅಲ್ಲಿನ ಆಡಳಿತ ಸಮಿತಿ ಇಂತಹ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು. ಸೂಕ್ತವಾದ ಭದ್ರತಾ ವ್ಯವಸ್ಥೆ ನಿಯೋಜಿಸುವ ಕಾರ್ಯ ಮಾಡಬೇಕೆಂದು ಕಮಿಷನರ್ ಮನವಿ ಮಾಡಿದರು.
ಸಾರ್ವಜನಿಕರು ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಅಥವಾ ನೇರವಾಗಿ ನನಗೂ ಮಾಹಿತಿ ನೀಡಬಹುದು. ಈ ಮೂಲಕ ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ದೂರವಾಣಿ ಸಂಖ್ಯೆ 9480802300ಗೆ ವಾಟ್ಸ್ ಆ್ಯಪ್ ಅಥವಾ ಮೆಸೇಜ್ ಮೂಲಕ ತಿಳಿಸಬಹುದು ಎಂದು ಪೊಲೀಸ್ ಕಮಿಷನರ್ ವಿನಂತಿಸಿಕೊಂಡರು.
(1/2)Appeal to people of Mangaluru Commisionerate to share information regarding any untoward developments in your neighborhood. pic.twitter.com/DvWTMB3PUz
— N. Shashi Kumar CP Mangaluru City (@compolmlr) January 23, 2021
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm