ಬ್ರೇಕಿಂಗ್ ನ್ಯೂಸ್
23-01-21 05:29 pm Mangalore Correspondent ಕರಾವಳಿ
ಮಂಗಳೂರು, ಜ.23 : ಮಂಗಳೂರು ಬಹಳ ಸಾಮರಸ್ಯದಿಂದ ಇರುವ ನಗರ. ಇತರ ರಾಜ್ಯಗಳಲ್ಲದೆ, ದೇಶ -ವಿದೇಶಗಳಿಂದಲೂ ಬಂದು ಜನರು ಇಲ್ಲಿ ವಾಸಿಸುತ್ತಿದ್ದಾರೆ. ಕಿಡಿಗೇಡಿಗಳ ಕೆಲವು ಕೃತ್ಯದಿಂದಾಗಿ ಮಂಗಳೂರಿನ ಹೆಸರು ಹಾಳಾಗಬಾರದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಹೇಳಿದರು.
ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಕಮಿಷನರ್, ಮಂಗಳೂರಿನಲ್ಲಿ ಇತ್ತೀಚೆಗೆ ಧಾರ್ಮಿಕ ಕೇಂದ್ರಗಳ ಹುಂಡಿಯಲ್ಲಿ ಅನುಚಿತ ವಸ್ತುಗಳು ಹಾಗೂ ಅಸಹ್ಯಕರ ರೀತಿಯಲ್ಲಿ ಬರೆದ ಕಾಗದಗಳನ್ನು ಹಾಕಿದ್ದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕೈದು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದರು.
ಈ ರೀತಿಯ ಕೃತ್ಯಗಳಲ್ಲಿ ತೊಡಗಿಸಿಕೊಂಡವರು ತಕ್ಷಣ ಇದನ್ನು ನಿಲ್ಲಿಸಬೇಕು. ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚುವ ಕೆಲಸ ಶೀಘ್ರ ಮಾಡಲಿದ್ದೇವೆ. ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು ಇರಬಹುದು, ಅಲ್ಲಿನ ಆಡಳಿತ ಸಮಿತಿ ಇಂತಹ ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು. ಸೂಕ್ತವಾದ ಭದ್ರತಾ ವ್ಯವಸ್ಥೆ ನಿಯೋಜಿಸುವ ಕಾರ್ಯ ಮಾಡಬೇಕೆಂದು ಕಮಿಷನರ್ ಮನವಿ ಮಾಡಿದರು.
ಸಾರ್ವಜನಿಕರು ಇಂತಹ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಅಥವಾ ನೇರವಾಗಿ ನನಗೂ ಮಾಹಿತಿ ನೀಡಬಹುದು. ಈ ಮೂಲಕ ಇಂತಹ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಲು ಸಹಕಾರಿಯಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ದೂರವಾಣಿ ಸಂಖ್ಯೆ 9480802300ಗೆ ವಾಟ್ಸ್ ಆ್ಯಪ್ ಅಥವಾ ಮೆಸೇಜ್ ಮೂಲಕ ತಿಳಿಸಬಹುದು ಎಂದು ಪೊಲೀಸ್ ಕಮಿಷನರ್ ವಿನಂತಿಸಿಕೊಂಡರು.
(1/2)Appeal to people of Mangaluru Commisionerate to share information regarding any untoward developments in your neighborhood. pic.twitter.com/DvWTMB3PUz
— N. Shashi Kumar CP Mangaluru City (@compolmlr) January 23, 2021
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm