ಬ್ರೇಕಿಂಗ್ ನ್ಯೂಸ್
25-01-21 10:45 am Mangalore Correspondent ಕರಾವಳಿ
ಮಂಗಳೂರು, ಜ.25: ಪ್ರತಿ ವರ್ಷ ಗಣರಾಜ್ಯೋತ್ಸವ ಸಮಾರಂಭದಲ್ಲಿ ನೀಡಲಾಗುವ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಈ ಬಾರಿ 32 ಮಕ್ಕಳನ್ನು ಆಯ್ಕೆ ಮಾಡಲಾಗಿದ್ದು ಕರ್ನಾಟಕದಿಂದ ಇಬ್ಬರು ಪುಟಾಣಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅದರಲ್ಲಿ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಒಬ್ಬ.
ನವೋನ್ವೇಷಣೆ ವಿಭಾಗದಲ್ಲಿ ಕರ್ನಾಟಕ ರಾಜ್ಯದಿಂದ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ರಾಕೇಶ ಕೃಷ್ಣ ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಬಾಲ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ವೀರ್ ಕಶ್ಯಪ್ ದೆಹಲಿಯ ಪಬ್ಲಿಕ್ ಸ್ಕೂಲಿನಲ್ಲಿ ಕಲಿಯುತ್ತಿದ್ದಾನೆ.
ಬಾಲ ಪುರಸ್ಕಾರಕ್ಕೆ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಏಳು, ನವೋನ್ವೇಷಣೆ ವಿಭಾಗದಲ್ಲಿ 9, ಶೈಕ್ಷಣಿಕ ಸಾಧನೆ ವಿಭಾಗದಲ್ಲಿ 5, ಕ್ರೀಡಾ ವಿಭಾಗದಲ್ಲಿ 7, ಶೌರ್ಯಕ್ಕಾಗಿ 3, ಸಮಾಜ ಸೇವೆ ವಿಭಾಗದಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ.

ಬಾಲ ಪುರಸ್ಕಾರಕ್ಕೆ ಆಯ್ಕೆಯಾದ ಮಕ್ಕಳ ಜೊತೆ ಇಂದು ಮಧ್ಯಾಹ್ನ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜೊತೆಗೆ ರಾಕೇಶ್ ಕೃಷ್ಣ ಭಾಗವಹಿಸಲಿದ್ದಾನೆ. ಇದೇ ವೇಳೆ, ಮೋದಿಯವರು ರಾಕೇಶ್ ಕೃಷ್ಣ ವಿಜ್ಞಾನ ವಿಭಾಗದಲ್ಲಿ ಆವಿಷ್ಕರಿಸಿದ ಸಾಧನದ ವಿಡಿಯೋ ತುಣುಕನ್ನು ವೀಕ್ಷಿಸಲಿದ್ದಾರೆ.
ರಾಕೇಶ್, ಬನ್ನೂರು ನಿವಾಸಿ ರವಿಶಂಕರ್ ನೆಕ್ಕಿಲ ಹಾಗೂ ಡಾ. ದುರ್ಗಾ ರತ್ನಾ ದಂಪತಿಯ ಪುತ್ರ. ಭಾರತ ಸರಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ ನಡೆಸಿದ ರಾಷ್ಟ್ರಮಟ್ಟದ ಇನ್ ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದ. ಅಲ್ಲದೆ, ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಜ್ಞಾನ ಮಾದರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
Among 32 Nominated for Pradan Mantri Rashtriya Awards 2021 Two Boys from Karnataka have been nominated in which one is a native of Puttur.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm