ಬ್ರೇಕಿಂಗ್ ನ್ಯೂಸ್
26-07-20 10:53 am ಕರಾವಳಿ
ಮಂಗಳೂರು, ಜು 26: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ನಿಟ್ಟಿನಲ್ಲಿ ಪ್ರತಿ ಭಾನುವಾರ ಸರ್ಕಾರ ವಿಧಿಸಿರುವ ಸಂಪೂರ್ಣ ಲಾಕ್ಡೌನ್ ಹಿನ್ನೆಲೆ ಜು 26ರ ಭಾನುವಾರ ದ.ಕ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ.
ಜಿಲ್ಲಾಡಳಿತ ಆದೇಶದಂತೆ ಜಿಲ್ಲೆಯು ಶನಿವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಸಂಪೂರ್ಣ ಬಂದ್ ಆಗಿದೆ.
ಭಾನುವಾರ ಮೆಡಿಕಲ್ಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾರುಕಟ್ಟೆಗಳು ಮುಚ್ಚಿದ್ದವು. ಅಗತ್ಯ ವಸ್ತುಗಳು ಹಾಗೂ ದಿನಸಿ ವಸ್ತುಗಳ ಮಾರಾಟ ಹೊರತುಪಡಿಸಿ ಎಲ್ಲಾ ಅಂಗಡಿಗಳು ಬಂದ್ ಆಗಿದ್ದವು.
ನಗರದ ಕೆಲವು ಕಡೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದ್ದು, ಯಾವುದೇ ಖಾಸಗಿ ವಾಹನಗಳ ಪ್ರಯಾಣಕ್ಕೆ ಅನುಮತಿ ನಿರ್ಬಧಿಸಲಾಗಿತ್ತು. ಈ ನಡುವೆಯೂ ಬೈಕು ಹಾಗೂ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಜನರನ್ನು ಪೊಲೀಸರು ತಡೆದಿದ್ದು, ಮಾನ್ಯ ಕಾರಣಗಳು ಅಥವಾ ಪಾಸ್ ಹೊಂದಿರುವವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಡಳಿತವು ಲಾಕ್ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿದೆ.
ಜಿಲ್ಲೆಯಲ್ಲಿ ಜುಲೈ 25 ರ ಶನಿವಾರದಂದು 218 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,612 ಕ್ಕೆ ಏರಿದೆ. ಈ ನಡುವೆ ಶನಿವಾರ 140 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿಗೆ ಈವರೆಗೆ ಒಟ್ಟು 115 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ 2,370 ಪ್ರಕರಣಗಳು ಸಕ್ರಿಯವಾಗಿವೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm