ಬ್ರೇಕಿಂಗ್ ನ್ಯೂಸ್
25-01-21 01:18 pm Mangalore Correspondent ಕರಾವಳಿ
ಮಂಗಳೂರು, ಜ.25: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಮತ್ತು ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.
ದೇಶಾದ್ಯಂತ ಚಳವಳಿ ನಿರತ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದ್ದು, ಕರ್ನಾಟಕದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮತ್ತು ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದರಂತೆ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೋ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದು ಈಗ ರೈತರನ್ನೇ ವಂಚಿಸುತ್ತಿವೆ. ಎರಡು ತಿಂಗಳಿನಿಂದ ರೈತರು ಬೀದಿಯಲ್ಲಿದ್ದಾರೆ, ಅರುವತ್ತರಷ್ಟು ರೈತರು ಚಳವಳಿ ಮಾಡುತ್ತಲೇ ಮರಣ ಹೊಂದಿದ್ದಾರೆ. ಆದರೆ ಮೋದಿ ಸರಕಾರವು ಮಾನವೀಯತೆ ಇಲ್ಲದ ರೀತಿ ರೈತರನ್ನು ನಡೆಸಿಕೊಳ್ಳುತ್ತಿದೆ. ಈ ದೇಶದ ಬುನಾದಿಯಾಗಿರುವ ರೈತರಿಗೆ ನ್ಯಾಯ ಕೊಡಿಸಲಾಗದ ಬಿಜೆಪಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ ಸರಕಾರ ಸಾಧಿಸಿದ ಕೃಷಿ ಕ್ರಾಂತಿ, ಭೂಸುಧಾರಣೆ ಎಲ್ಲವನ್ನೂ ಬಿಜೆಪಿ ನಾಶ ಪಡಿಸುತ್ತಿದೆ. ಇದು ಬಿಜೆಪಿಯ ಅವನತಿಗೆ ಕಾರಣವಾಗಲಿದೆ ಎಂದರು.
ಸ್ಥಳೀಯ ಕಾರ್ಪೊರೇಟರ್ ವಿನಯರಾಜ್ ಮಾತನಾಡಿದರು. ಪ್ರತಿಭಟನೆಯಲ್ಲಿ ನಮಿತಾ ರಾವ್, ಗೀತಾ, ಮರಿಯಮ್ಮ ಥಾಮಸ್, ಮಂಜುಳ ನಾಯಕ್, ಜೀನತ್ ಸಂಶುದ್ದೀನ್, ಶಶಿಧರ ಹೆಗ್ಡೆ, ಕೇಶವ ಮರೋಳಿ, ನೀರಜ್ ಪಾಲ್, ಭರತೇಶ್ ಅಮೀನ್, ಟಿ. ಕೆ. ಸುಧೀರ್, ವಿಶ್ವಾಸ್ ದಾಸ್, ಯೂಸುಫ್ ಉಚ್ಚಿಲ, ಗಣೇಶ ರಾವ್ ಮೊದಲಾದವರು ಸೇರಿದ್ದರು.
Video:
In a show of support to the farmers protesting against the farm laws in New Delhi and Karnataka Mangalore, Congress leaders held a mass protest.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm