ಬ್ರೇಕಿಂಗ್ ನ್ಯೂಸ್
25-01-21 03:05 pm Mangalore Correspondent ಕರಾವಳಿ
ಉಳ್ಳಾಲ, ಜ.25 : ಉಳ್ಳಾಲ ಕೊರಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರ ಗೋಪಾಲಕೃಷ್ಣ ಮಂದಿರದಲ್ಲಿ ಕಿಡಿಗೇಡಿಗಳು ವಿಕೃತ ಅಟ್ಟಹಾಸ ಮೆರೆದಿದ್ದು ಇನ್ನೂ ಆರೋಪಿಗಳ ಬಂಧನ ಸಾಧ್ಯವಾಗಿಲ್ಲ. ಹಿಂದು ಸಂಘಟನೆಗಳು ಈಗ ಪ್ರತಿಭಟನೆಗೆ ಮುಂದಾಗಿದ್ದು ಕೇಳಿದ್ದೇನೆ. ಆದರೆ, ಅವರು ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಸುವುದಲ್ಲ. ಪ್ರತಿಭಟನೆಗೆ ಈ ಜಾಗ ಸೂಕ್ತವಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮುಂದೆ ಪ್ರತಿಭಟಿಸಲಿ ಎಂದು ಇಂಟಕ್ ಮುಖಂಡ ದಿನಕರ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

ಉಳ್ಳಾಲ ಕೊರಗಜ್ಜನ ಕಟ್ಟೆ ಹಾಗೂ ಕೊಣಾಜೆ ಮುಲಾರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪವಿತ್ರ, ಅತ್ತಾವರ ಬಬ್ಬುಸ್ವಾಮಿಯ ಕಾಣಿಕೆ ಹುಂಡಿಗೂ ಅವಮಾನ, ತೊಕ್ಕೊಟ್ಟಿನ ಬೀಫ್ ಸ್ಟಾಲ್ ಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಕದಡಿಸುವ ಹುನ್ನಾರ ನಡೆಯುತ್ತಿದ್ದು, ಕ್ಷೇತ್ರದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಲು ಪ್ರಯತ್ನಿಸಿದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೊರಗಜ್ಜನ ಕ್ಷೇತ್ರಕ್ಕೆ ಧಕ್ಕೆ ಉಂಟು ಮಾಡಿದರೆ ಕ್ಷೇತ್ರದ ಶಾಸಕ ಖಾದರ್ ಸುಮ್ಮನೆ ಇರೋರಲ್ಲ. ಅವರ ಮುತುವರ್ಜಿಯಿಂದ ನಾವೆಲ್ಲ ಇಲ್ಲಿ ಸೇರಿದ್ದೇವೆ, ಹೊರತು ರಾಜಕೀಯ ಮಾಡಲು ಅಲ್ಲ. ರಾಜಕೀಯ ಮಾಡಲು, ಸಂಘಟನೆಗಳ ಮುಖಾಂತರ ಪ್ರತಿಭಟನೆ ನಡೆಸೋರು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟಿಸೋದೆ ಸೂಕ್ತ ಎಂದರು. ರಾಜ್ಯದಲ್ಲಿ ನಿಮ್ಮದೇ ಸರಕಾರ ಇರುವಾಗ ತೊಕ್ಕೊಟ್ಟಿನಲ್ಲಿ ಇಂತಹ ಪ್ರತಿಭಟನೆಗಳ ಅಗತ್ಯ ಇದೆಯೇ ಎಂದು ಪ್ರಶ್ನಿಸಿದರು.
Miscreants Cruel act in temples in Ullal and Konaje congress Dinesh Sheety Slams at BJP for showing Negligence.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm