ಬ್ರೇಕಿಂಗ್ ನ್ಯೂಸ್
25-01-21 06:29 pm Mangalore Correspondent ಕರಾವಳಿ
ಮಂಗಳೂರು, ಜ.25 : ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಪುತ್ತೂರಿನ ರಾಕೇಶ್ ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ವಿಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಆವಿಷ್ಕಾರದ ಪ್ರಾತ್ಯಕ್ಷಿಕೆ ನೀಡಿದರು. ತಾವು ಆವಿಷ್ಕರಿಸಿದ ಸೀಡೋಗ್ರಾಫರ್ ಯಂತ್ರವು ರೈತರಿಗೆ ಯಾವ ರೀತಿಯಲ್ಲಿ ಉಪಯುಕ್ತ ಅನ್ನುವುದನ್ನು ತೋರಿಸಿಕೊಟ್ಟರು.
ಬಳಿಕ ಮಾಧ್ಯಮದ ಮಂದಿಗೆ ರಾಕೇಶ ಕೃಷ್ಣ ತಮ್ಮ ಯಂತ್ರದ ಬಳಕೆಯನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿದರು. ರೈತರು ಮಾಮೂಲಿ ಯಂತ್ರಗಳನ್ನು ಬಳಸಿ ಹೆಕ್ಟೇರ್ ಪ್ರದೇಶಕ್ಕೆ ಬಿತ್ತನೆ ಮಾಡಲು ಕನಿಷ್ಠ 100-120 ಗಂಟೆ ಬೇಕಾಗುತ್ತದೆ. ಆದರೆ, ಈಗ ಅಭಿವೃದ್ಧಿಪಡಿಸಿರುವ ಸೀಡೋಗ್ರಾಫರ್ ಯಂತ್ರದಲ್ಲಿ ಒಂದು ಹೆಕ್ಟೇರ್ ಪ್ರದೇಶವನ್ನು ಕೇವಲ 18 ಗಂಟೆಯೊಳಗೆ ಬಿತ್ತನೆ ಮಾಡಲು ಸಾಧ್ಯ ಎಂದು ರಾಕೇಶ್ ಕೃಷ್ಣ ಹೇಳಿದರು.

ಗದ್ದೆ ಅಥವಾ ಹೊಲದಲ್ಲಿ ಸೀಡೋಗ್ರಾಫರ್ ಯಂತ್ರವನ್ನು ಬಳಸುವಾಗ ಅದು ನೇಗಿಲು ರೀತಿಯಲ್ಲಿ ಗದ್ದೆಯನ್ನು ಉಳುಮೆ ಮಾಡುವುದಲ್ಲದೆ, ಜೊತೆಗೇ ಬಿತ್ತನೆಯನ್ನೂ ಮಾಡುತ್ತದೆ. ಯಂತ್ರದಲ್ಲಿ ಮೊದಲೇ ಬೀಜ ತುಂಬಿಸಲಾಗುತ್ತದೆ. ಯಂತ್ರ ಮುಂದುವರಿದಂತೆ ಬೀಜವು ಅದರಿಂದ ಉದುರುತ್ತದೆ. ಅದರ ಜೊತೆಗೆ ಟ್ಯಾಂಕ್ನಲ್ಲಿರುವ ನೀರೂ ಬೀಳುತ್ತದೆ. ಬೀಜ ಹಾಕಿದ ತಕ್ಷಣ ಯಂತ್ರದಲ್ಲಿರುವ ಪ್ಲೇಟ್ ಬೀಜದ ಮೇಲೆ ಮಣ್ಣನ್ನು ಮುಚ್ಚಿಕೊಂಡು ಬರುತ್ತದೆ. ಈ ಯಂತ್ರದ ಸಹಾಯದಿಂದ ವಿವಿಧ ವಿನ್ಯಾಸದ ಬೀಜಗಳನ್ನು ಬಿತ್ತನೆ ಮಾಡಬಹುದು ಎಂದು ರಾಕೇಶ್ ಕೃಷ್ಣ ಮಾಹಿತಿ ನೀಡಿದರು.

3- 4 ವರ್ಷಗಳ ಸತತ ಪ್ರಯತ್ನದಿಂದ ಸೀಡೋಗ್ರಾಫರ್ ಯಂತ್ರವನ್ನು ಅಭಿವೃದ್ಧಿ ಪಡಿಸಿದ್ದೇನೆ. ಏಳನೇ ತರಗತಿಯಿಂದಲೇ ಈ ಯಂತ್ರದ ಕೆಲಸ ಆರಂಭಿದ್ದೆ. ಸಹೋದರಿ ರಶ್ಮಿ ಯಂತ್ರ ತಯಾರಿಗೆ ಬಹಳಷ್ಟು ಸಹಕರಿಸಿದ್ದಾರೆ. ಅಲ್ಲದೆ ಹೆತ್ತವರು ಹಾಗೂ ಶಾಲಾ ಕಾಲೇಜಿನ ಅಧ್ಯಾಪಕರ ಸಲಹೆ, ಸಹಕಾರವು ನನ್ನನ್ನು ಇಷ್ಟು ಎತ್ತರಕ್ಕೆ ಬೆಳೆಸಿದೆ ಎಂದು ಹೇಳಿದರು.

ರಾಕೇಶ್ ಕೃಷ್ಣ ತಾಯಿ ಡಾ. ದುರ್ಗಾರತ್ನ ಸಿ. ಮಾತನಾಡಿ, ನನ್ನ ಮಗ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಆಯ್ಕೆ ಆಗಿರುವುದು ಬಹಳ ಸಂತಸ ತಂದಿದೆ. ಅದೇ ರೀತಿ ಪ್ರಧಾನಿ ಮೋದಿಯವರ ಜೊತೆ ನೇರವಾಗಿ ಮಾತನಾಡಲು ಅವಕಾಶ ಸಿಕ್ಕಿದ್ದು ಅದ್ಭುತ ಅನುಭವ. ರೈತರಿಗೆ ಈ ಯಂತ್ರದಿಂದ ಉಪಯೋಗ ಸಿಗಲಿ ಎಂದು ಹೇಳಿದರು.
Video:
Rakesh Krishna, one among 32 children in the country to win Pradhan Mantri Rastriya Bal Puraskar 2021, spoke to media on Monday January 25 after interacting with Prime Minister Narendra Modi through virtual conference at zilla panchayat office here.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm