ಬ್ರೇಕಿಂಗ್ ನ್ಯೂಸ್
26-01-21 02:04 pm Mangalore Correspondent ಕರಾವಳಿ
ಕೊಣಾಜೆ, ಜ.26 : ಗಣರಾಜ್ಯೋತ್ಸವ ದಿನ ಸರ್ಕಾರಿ ಸಂಸ್ಥೆಗಳ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಪೂರ್ವಕವಾಗಿ ಹಾರಿಸುವುದು ಕಡ್ಡಾಯ. ಆದರೆ, ಇಲ್ಲಿನ ಬೆಳ್ಮ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಮಾತ್ರ ಬೆಳಗ್ಗೆ ಹತ್ತು ಗಂಟೆಯಾದರೂ ಧ್ವಜಾರೋಹಣ ಆಗಿರಲಿಲ್ಲ. ಸ್ಥಳೀಯರು ಪಿಡಿಓ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ಬಳಿಕ ಯಾರೋ ಒಬ್ಬ ತಾತ್ಕಾಲಿಕ ಸಿಬಂದಿ ಮೂಲಕ ಧ್ವಜವನ್ನು ಏರಿಸಿದ್ದಾರೆ. ಆತ ಚಪ್ಪಲಿ ಹಾಕಿ, ದೂರದಲ್ಲಿ ನಿಂತು ಧ್ವಜ ಏರಿಸಿದ್ದಲ್ಲದೆ ಧ್ವಜ ವಂದನೆಯನ್ನೂ ಮಾಡದೆ ಅವಮಾನ ಮಾಡಿದ್ದಾನೆ. ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದ ವ್ಯಕ್ತಿ ಮತ್ತು ನಿರ್ಲಕ್ಷ್ಯ ತೋರಿದ ಪಿಡಿಓ ಅಧಿಕಾರಿಯನ್ನು ಅಮಾನತು ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಗಣರಾಜ್ಯೋತ್ಸವ ದಿನ ಬೆಳಗ್ಗೆ ಒಂಬತ್ತು ಗಂಟೆ ಮೊದಲು ಸರ್ಕಾರಿ ಸಂಸ್ಥೆಗಳ ಮುಂದೆ ರಾಷ್ಟ್ರ ಧ್ವಜಾರೋಹಣ ಮಾಡಬೇಕೆಂದು ನಿಯಮ ಇದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಬೆಳ್ಮ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನಡೆಯದಿರುವುದು ಸಾರ್ವಜನಿಕವಾಗಿ ಆಕ್ರೋಶಕ್ಕೆ ಕಾರಣವಾಯಿತು.

ಮಂಗಳೂರು ವಿಶ್ವವಿದ್ಯಾಲಯ ರಸ್ತೆಯಲ್ಲೇ ಗ್ರಾಪಂ ಕಚೇರಿ ಇರುವುದರಿಂದ ಹಾಗೂ ಮೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಅನತಿ ದೂರದಲ್ಲೇ ಇರುವುದರಿಂದ ಹೊರ ರಾಜ್ಯ ಹಾಗೂ ವಿದೇಶಿ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಇಂಥ ಜಾಗದಲ್ಲಿ ಬೆಳ್ಮ ಗ್ರಾಮ ಪಂಚಾಯಿತಿ ಎದುರಲ್ಲಿ ಈ ರೀತಿಯ ಅಸಡ್ಡೆ ಆಗಿರುವುದು ಯಾವ ಸಂದೇಶ ತಲುಪಬಹುದು ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ.

ಬೆಳ್ಮ ಪಂಚಾಯಿತಿ ಪಿಡಿಒ ನವೀನ್ ಹೆಗ್ಡೆ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ. ಇದೇ ವೇಳೆ, ಯುವಕನೊಬ್ಬ ಸಾದಾ ಸೀದಾ ಎನ್ನುವ ರೀತಿ ರಾಷ್ಟ್ರ ಧ್ವಜವನ್ನು ಏರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರ ಟೀಕೆ, ಟಿಪ್ಪಣಿಗೆ ಆಹಾರವಾಗಿದೆ.
Video:
PDO of Belma gram panchayat Naveen Hedge in Mangalore has shown disrespect to national flag. Villagers urge suspension.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm