ಬ್ರೇಕಿಂಗ್ ನ್ಯೂಸ್
26-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.26: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ವಿದ್ಯಾರ್ಥಿನಿ ಭಾಗವಹಿಸಿದ್ದಾಳೆ. ಪುತ್ತೂರಿನ ಫಿಲೋಮಿನಾ ಕಾಲೇಜಿನ ರಕ್ಷಾ ಅಂಚನ್ ಎನ್ ಸಿಸಿ ಕ್ಯಾಡೆಟ್ ಆಗಿ ಭಾಗವಹಿಸಿದ ವಿದ್ಯಾರ್ಥಿನಿ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಎನ್ ಸಿಸಿ ಕೆಡೆಟ್ ಗಳು ಭಾಗವಹಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ನಿರ್ಬಂಧ ಇದ್ದ ಕಾರಣ ಒಬ್ಬರನ್ನು ಮಾತ್ರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಗೋವಾ- ಕರ್ನಾಟಕ ಡೈರೆಕ್ಟರೇಟ್ ನಿಂದ 111 ಕೆಡೆಟ್ ಗಳು ರಿಪಬ್ಲಿಕ್ ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ವಿಭಾಗದಿಂದ ಕೇವಲ 26 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದರಲ್ಲಿ 16 ಮಂದಿ ಹುಡುಗರಾಗಿದ್ದು, 10 ಮಂದಿ ಹುಡುಗಿಯರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕಿನ ರಕ್ಷಾ ಅಂಚನ್ ಒಬ್ಬರಷ್ಟೇ ಆಯ್ಕೆಯಾಗಿದ್ದರು. ರಕ್ಷಾ ಅವರು ನೆಲ್ಯಾಡಿಯ ಉದ್ಯಮಿ ರಮೇಶ್ ಹಾಗೂ ಕಾಂಗ್ರೆಸ್ ನಾಯಕಿ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಅವರ ಪುತ್ರಿ.


ಕಳೆದ ಡಿ.17ರಂದು ದೆಹಲಿಗೆ ಪ್ರಯಾಣ ಬೆಳೆಸಿದ್ದ ರಕ್ಷಾ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಜ.3ರಿಂದ ಪರೇಟ್ ತರಬೇತಿಯನ್ನು ಪಡೆದಿದ್ದರು. ಅಂದಹಾಗೆ, ರಕ್ಷಾ ಅಂಚನ್ ಫಿಲೋಮಿನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ. ಈ ಹಿಂದೆಲ್ಲಾ ಪ್ರತಿ ವರ್ಷ 11-12 ಮಂದಿ ಕೆಡೆಟ್ ಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಸಿಗುತ್ತಿತ್ತು. ಆದರೆ, ಈ ಬಾರಿ ಕೊರೊನಾದಿಂದಾಗಿ ಜಿಲ್ಲೆಯಿಂದ ಒಬ್ಬಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಹಲವು ಮಂದಿ ಪ್ರತಿಭಾವಂತ ಕೆಡೆಟ್ ಗಳಿದ್ದರು.
ಕಳೆದ ಬಾರಿ ರಕ್ಷಾ ಅಂಚನ್ ಅದೇ ಪರೇಡ್ ನಲ್ಲಿ ಭಾಗವಹಿಸುವುದರಿಂದ ಮಿಸ್ ಆಗಿದ್ದಳು. ಹೀಗಾಗಿ ರಕ್ಷಾಳನ್ನು ಈ ಬಾರಿ ಆಯ್ಕೆ ಮಾಡಲಾಯ್ತು ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಜಾನ್ಸನ್ ಹೇಳಿದ್ದಾರೆ.
Raksha Anchan, a B Sc student from St Philomena College, Puttur is the ONLY NCC Cadet from Dakshina Kannada to participate in Republic Day Parade in New Delhi on 26 January 2021
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm