ಬ್ರೇಕಿಂಗ್ ನ್ಯೂಸ್
26-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.26: ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ವಿದ್ಯಾರ್ಥಿನಿ ಭಾಗವಹಿಸಿದ್ದಾಳೆ. ಪುತ್ತೂರಿನ ಫಿಲೋಮಿನಾ ಕಾಲೇಜಿನ ರಕ್ಷಾ ಅಂಚನ್ ಎನ್ ಸಿಸಿ ಕ್ಯಾಡೆಟ್ ಆಗಿ ಭಾಗವಹಿಸಿದ ವಿದ್ಯಾರ್ಥಿನಿ.
ಸಾಮಾನ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಎನ್ ಸಿಸಿ ಕೆಡೆಟ್ ಗಳು ಭಾಗವಹಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ನಿರ್ಬಂಧ ಇದ್ದ ಕಾರಣ ಒಬ್ಬರನ್ನು ಮಾತ್ರ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ. ಪ್ರತಿ ವರ್ಷ ಗೋವಾ- ಕರ್ನಾಟಕ ಡೈರೆಕ್ಟರೇಟ್ ನಿಂದ 111 ಕೆಡೆಟ್ ಗಳು ರಿಪಬ್ಲಿಕ್ ಪರೇಡ್ ನಲ್ಲಿ ಭಾಗವಹಿಸುತ್ತಾರೆ. ಈ ಬಾರಿ ವಿಭಾಗದಿಂದ ಕೇವಲ 26 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇದರಲ್ಲಿ 16 ಮಂದಿ ಹುಡುಗರಾಗಿದ್ದು, 10 ಮಂದಿ ಹುಡುಗಿಯರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕಿನ ರಕ್ಷಾ ಅಂಚನ್ ಒಬ್ಬರಷ್ಟೇ ಆಯ್ಕೆಯಾಗಿದ್ದರು. ರಕ್ಷಾ ಅವರು ನೆಲ್ಯಾಡಿಯ ಉದ್ಯಮಿ ರಮೇಶ್ ಹಾಗೂ ಕಾಂಗ್ರೆಸ್ ನಾಯಕಿ, ಪುತ್ತೂರು ತಾಲೂಕು ಪಂಚಾಯತ್ ಸದಸ್ಯೆ ಉಷಾ ಅಂಚನ್ ಅವರ ಪುತ್ರಿ.


ಕಳೆದ ಡಿ.17ರಂದು ದೆಹಲಿಗೆ ಪ್ರಯಾಣ ಬೆಳೆಸಿದ್ದ ರಕ್ಷಾ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದು ಜ.3ರಿಂದ ಪರೇಟ್ ತರಬೇತಿಯನ್ನು ಪಡೆದಿದ್ದರು. ಅಂದಹಾಗೆ, ರಕ್ಷಾ ಅಂಚನ್ ಫಿಲೋಮಿನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿದ್ಯಾರ್ಥಿನಿ. ಈ ಹಿಂದೆಲ್ಲಾ ಪ್ರತಿ ವರ್ಷ 11-12 ಮಂದಿ ಕೆಡೆಟ್ ಗಳಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಅವಕಾಶ ಸಿಗುತ್ತಿತ್ತು. ಆದರೆ, ಈ ಬಾರಿ ಕೊರೊನಾದಿಂದಾಗಿ ಜಿಲ್ಲೆಯಿಂದ ಒಬ್ಬಳನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಈ ಬಾರಿಯೂ ಹಲವು ಮಂದಿ ಪ್ರತಿಭಾವಂತ ಕೆಡೆಟ್ ಗಳಿದ್ದರು.
ಕಳೆದ ಬಾರಿ ರಕ್ಷಾ ಅಂಚನ್ ಅದೇ ಪರೇಡ್ ನಲ್ಲಿ ಭಾಗವಹಿಸುವುದರಿಂದ ಮಿಸ್ ಆಗಿದ್ದಳು. ಹೀಗಾಗಿ ರಕ್ಷಾಳನ್ನು ಈ ಬಾರಿ ಆಯ್ಕೆ ಮಾಡಲಾಯ್ತು ಎಂದು ಕಾಲೇಜಿನ ಎನ್ ಸಿಸಿ ಅಧಿಕಾರಿ ಜಾನ್ಸನ್ ಹೇಳಿದ್ದಾರೆ.
Raksha Anchan, a B Sc student from St Philomena College, Puttur is the ONLY NCC Cadet from Dakshina Kannada to participate in Republic Day Parade in New Delhi on 26 January 2021
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm