ಬ್ರೇಕಿಂಗ್ ನ್ಯೂಸ್
26-01-21 09:05 pm Mangaluru Correspondent ಕರಾವಳಿ
ಮಂಗಳೂರು, ಜ.26: ಒಂದೆಡೆ ಕೊರೊನಾ ನಿರ್ಬಂಧ, ಕ್ವಾರಂಟೈನ್ ನೆಪದಲ್ಲಿ ಎನ್ ಆರ್ ಐಗಳು ನರಳುತ್ತಿದ್ದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಏಜನ್ಸಿಗಳು ಎನ್ಆರ್ ಐಗಳಿಂದಲೇ ಕೊರೊನಾ ಪ್ಯಾಕೇಜ್ ಹೆಸರಲ್ಲಿ ಹಣ ಪೀಕಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.
ಕುವೈಟ್ ಇನ್ನಿತರ ಸೌದಿ ರಾಷ್ಟ್ರಗಳಿಗೆ ತೆರಳುವ ಮಂದಿ ಕಡ್ಡಾಯ 14 ದಿನಗಳ ಕ್ವಾರಂಟೈನ್ ಇರಬೇಕು. ಅಲ್ಲದೆ, ತಮ್ಮ ಕೆಲಸಕ್ಕೆ ಹಾಜರಾಗುವ ವೇಳೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟನ್ನೂ ತೋರಿಸಬೇಕು. ಹೀಗಾಗಿ ಮಂಗಳೂರು ಸೇರಿ ಕರಾವಳಿಯಿಂದ ತೆರಳುವ ಮಂದಿಗೆ ಟ್ರಾವೆಲ್ ಏಜನ್ಸಿಗಳು ಪ್ಯಾಕೇಜ್ ವ್ಯವಸ್ಥೆ ಮಾಡಿವೆ. ಈ ಪ್ಯಾಕೇಜ್ ಅಡಿ ಹೋದಲ್ಲಿ ವಿಮಾನದ ಟಿಕೆಟ್, ಜೊತೆಗೆ ಅಲ್ಲಿ 14 ದಿನ ಕ್ವಾರಂಟೈನ್ ಇರಲು ಹೊಟೇಲ್ ವ್ಯವಸ್ಥೆ ಮತ್ತು ಆರ್ ಟಿ ಪಿಸಿಆರ್ ಟೆಸ್ಟ್ ಸೇರಿ ಎಲ್ಲವನ್ನೂ ಒಳಗೊಂಡಿದೆ ಎಂದು ಪ್ರಯಾಣಿಕರನ್ನು ನಂಬಿಸಲಾಗುತ್ತದೆ.


ಈ ನಡುವೆ, ಕುವೈಟ್, ಸೌದಿಯಲ್ಲಿ ಹೊರ ದೇಶಗಳ ಪ್ರಯಾಣಿಕರ ಸಂಚಾರಕ್ಕೆ ಬ್ರೇಕ್ ಹಾಕಿದ್ದು ತುರ್ತಾಗಿ ಊರಿಗೆ ಬಂದ ಪ್ರಯಾಣಿಕರನ್ನು ಚಿಂತೆಗೀಡು ಮಾಡಿದೆ. ಕಂಪನಿಗಳು ತುರ್ತಾಗಿ ಕೆಲಸಕ್ಕೆ ಹಾಜರಾಗಲು ಸೂಚನೆ ನೀಡುವುದರಿಂದ ಪ್ರಯಾಣ ಮಾಡಬೇಕಾದ ಅನಿವಾರ್ಯತೆಯಲ್ಲಿ ಉದ್ಯೋಗಿಗಳು ಟ್ರಾವೆಲ್ ಏಜನ್ಸಿಗಳನ್ನು ಸಂಪರ್ಕಿಸುತ್ತಾರೆ. ಈ ವೇಳೆ, ಕುವೈಟ್ ತೆರಳಬೇಕಾದವರಿಗೆ ದುಬೈ, ಶಾರ್ಜಾಗೆ ಒಯ್ದು ಅಲ್ಲಿ ಕ್ವಾರಂಟೈನ್ ಮಾಡುವ ಪ್ಯಾಕೇಜ್ ವ್ಯವಸ್ಥೆ ಬಗ್ಗೆ ಹೇಳುತ್ತಾರೆ. ಇದೇ ರೀತಿ ವ್ಯಕ್ತಿಯೊಬ್ಬರಿಗೆ ಮಂಗಳೂರಿನ ಟ್ರಾವೆಲ್ ಏಜನ್ಸಿಯವರು ಸ್ಟಾರ್ ಹೊಟೇಲ್ ವ್ಯವಸ್ಥೆ ಸೇರಿ ಕುವೈಟ್ ಪ್ರಯಾಣಕ್ಕೆ 1.25 ಲಕ್ಷ ರೂ.ಗಳ ಪ್ಯಾಕೇಜ್ ವ್ಯವಸ್ಥೆ ಮಾಡಿದ್ದರು. ಆದರೆ, ಹೀಗೆ ಹೋದ ವ್ಯಕ್ತಿಯನ್ನು ಮೋಸ ಮಾಡಲಾಗಿದ್ದು ಸ್ಟಾರ್ ಹೊಟೇಲ್ ಬದಲು ಸಾದಾ ಸೀದಾ ಲಾಡ್ಜ್ ನಲ್ಲಿ ಕುಳ್ಳಿರಿಸಿದ್ದರು. ಅಲ್ಲದೆ, ಊಟದ ವ್ಯವಸ್ಥೆಯೂ ಸರಿಯಾಗಿ ನೀಡದೆ ಲಕ್ಷಾಂತರ ರೂ. ಹಣ ಲೂಟಿ ಮಾಡಿದ್ದಾರೆ ಎಂದು ಆ ವ್ಯಕ್ತಿ ದೂರಿದ್ದಾರೆ.

ಈ ಬಗ್ಗೆ ಕೇಳಲು ಏಜನ್ಸಿಗೆ ಫೋನ್ ಮಾಡಿದರೆ, ರಿಸೀವ್ ಮಾಡುತ್ತಿರಲಿಲ್ಲ. ಅಲ್ಲದೆ, ಕೆಲವೊಮ್ಮೆ ರಿಸೀವ್ ಮಾಡಿದರೂ ಬೇಕಾದರೆ ಹೋಗಿ ಇಲ್ಲದಿದ್ದರೆ ಪ್ರಯಾಣದ ಟಿಕೆಟನ್ನೇ ರದ್ದು ಪಡಿಸುವ ಬೆದರಿಕೆ ಒಡ್ಡುತ್ತಾರೆ ಎಂದು ಬೇಸತ್ತ ಪ್ರಯಾಣಿಕರು ಟ್ರಾವೆಲ್ ಏಜನ್ಸಿಯ ದೋಖಾವನ್ನು ಹೇಳಿಕೊಂಡಿದ್ದಾರೆ. ಕರಾವಳಿಯಿಂದ ಇಂಥ ಪ್ಯಾಕೇಜ್ ನಂಬಿ ಹೋದ ಹಲವಾರು ಮಂದಿ ಮೋಸ ಹೋಗಿದ್ದಾರೆ. ಆದರೆ, ಅರ್ಧ ದಾರಿಯಲ್ಲಿ ಈ ಮೋಸ ಅರಿವಾಗುವುದರಿಂದ ಏನೂ ಮಾಡಲಾಗುತ್ತಿಲ್ಲ. ಅಲ್ಲದೆ, ಈ ಬಗ್ಗೆ ಪ್ರಶ್ನೆ ಮಾಡಿದರೆ ಟಿಕೆಟ್ ರದ್ದುಪಡಿಸುವ ಬೆದರಿಕೆ ನೀಡುತ್ತಿದ್ದಾರೆ.

ಮಂಗಳೂರು, ಉಡುಪಿಯಲ್ಲಿ ಹಲವಾರು ಟ್ರಾವೆಲ್ ಏಜನ್ಸಿಗಳು ಇದೇ ರೀತಿಯ ದಂಧೆಯಲ್ಲಿ ತೊಡಗಿರುವ ಬಗ್ಗೆ ಶಂಕೆ ಮೂಡಿದೆ. ಸಾಮಾನ್ಯವಾಗಿ ದುಬೈ, ಕುವೈಟ್ ಇನ್ನಿತರ ಸೌದಿ ರಾಷ್ಟ್ರಗಳಿಗೆ ಪ್ರಯಾಣಿಸಲು ವಿಮಾನ ಟಿಕೆಟ್ ದರ 20 ಸಾವಿರ ಆಸುಪಾಸು ಇರುತ್ತದೆ. ಆದರೆ, ಹೊಟೇಲ್ ಸೌಲಭ್ಯ ಸೇರಿ ಒಂದು ಲಕ್ಷಕ್ಕೂ ಹೆಚ್ಚು ಪ್ಯಾಕೇಜ್ ಬಿಲ್ ಮಾಡುವ ದಲ್ಲಾಳಿ ಟ್ರಾವೆಲ್ ಏಜನ್ಸಿಗಳು ಎನ್ನಾರೈಗಳನ್ನೇ ದೋಚುವ ಹೀನ ಕೆಲಸಕ್ಕೆ ಕೈಹಾಕಿವೆ. ಸ್ಟಾರ್ ಹೊಟೇಲ್ ಹೆಸರಲ್ಲಿ ಸಾಮಾನ್ಯ ಹಾದಿ ಬೀದಿಯ ಲಾಡ್ಜ್ ಗಳಲ್ಲಿ ಇರಿಸಿ, ಎನ್ನಾರೈಗಳನ್ನೇ ವಂಚಿಸುತ್ತಿರುವ ವಿಚಾರ ಬಯಲಾಗಿದೆ.
Travels agencies in Mangalore are constantly cheating NRI's with corona air ticket and package in lakhs between Mangalore to Dubai and Kuwait has come to light.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm