ಬ್ರೇಕಿಂಗ್ ನ್ಯೂಸ್
26-01-21 09:05 pm Mangaluru Correspondent ಕರಾವಳಿ
ಮಂಗಳೂರು, ಜ.26: ಒಂದೆಡೆ ಕೊರೊನಾ ನಿರ್ಬಂಧ, ಕ್ವಾರಂಟೈನ್ ನೆಪದಲ್ಲಿ ಎನ್ ಆರ್ ಐಗಳು ನರಳುತ್ತಿದ್ದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಏಜನ್ಸಿಗಳು ಎನ್ಆರ್ ಐಗಳಿಂದಲೇ ಕೊರೊನಾ ಪ್ಯಾಕೇಜ್ ಹೆಸರಲ್ಲಿ ಹಣ ಪೀಕಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.
ಕುವೈಟ್ ಇನ್ನಿತರ ಸೌದಿ ರಾಷ್ಟ್ರಗಳಿಗೆ ತೆರಳುವ ಮಂದಿ ಕಡ್ಡಾಯ 14 ದಿನಗಳ ಕ್ವಾರಂಟೈನ್ ಇರಬೇಕು. ಅಲ್ಲದೆ, ತಮ್ಮ ಕೆಲಸಕ್ಕೆ ಹಾಜರಾಗುವ ವೇಳೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟನ್ನೂ ತೋರಿಸಬೇಕು. ಹೀಗಾಗಿ ಮಂಗಳೂರು ಸೇರಿ ಕರಾವಳಿಯಿಂದ ತೆರಳುವ ಮಂದಿಗೆ ಟ್ರಾವೆಲ್ ಏಜನ್ಸಿಗಳು ಪ್ಯಾಕೇಜ್ ವ್ಯವಸ್ಥೆ ಮಾಡಿವೆ. ಈ ಪ್ಯಾಕೇಜ್ ಅಡಿ ಹೋದಲ್ಲಿ ವಿಮಾನದ ಟಿಕೆಟ್, ಜೊತೆಗೆ ಅಲ್ಲಿ 14 ದಿನ ಕ್ವಾರಂಟೈನ್ ಇರಲು ಹೊಟೇಲ್ ವ್ಯವಸ್ಥೆ ಮತ್ತು ಆರ್ ಟಿ ಪಿಸಿಆರ್ ಟೆಸ್ಟ್ ಸೇರಿ ಎಲ್ಲವನ್ನೂ ಒಳಗೊಂಡಿದೆ ಎಂದು ಪ್ರಯಾಣಿಕರನ್ನು ನಂಬಿಸಲಾಗುತ್ತದೆ.


ಈ ನಡುವೆ, ಕುವೈಟ್, ಸೌದಿಯಲ್ಲಿ ಹೊರ ದೇಶಗಳ ಪ್ರಯಾಣಿಕರ ಸಂಚಾರಕ್ಕೆ ಬ್ರೇಕ್ ಹಾಕಿದ್ದು ತುರ್ತಾಗಿ ಊರಿಗೆ ಬಂದ ಪ್ರಯಾಣಿಕರನ್ನು ಚಿಂತೆಗೀಡು ಮಾಡಿದೆ. ಕಂಪನಿಗಳು ತುರ್ತಾಗಿ ಕೆಲಸಕ್ಕೆ ಹಾಜರಾಗಲು ಸೂಚನೆ ನೀಡುವುದರಿಂದ ಪ್ರಯಾಣ ಮಾಡಬೇಕಾದ ಅನಿವಾರ್ಯತೆಯಲ್ಲಿ ಉದ್ಯೋಗಿಗಳು ಟ್ರಾವೆಲ್ ಏಜನ್ಸಿಗಳನ್ನು ಸಂಪರ್ಕಿಸುತ್ತಾರೆ. ಈ ವೇಳೆ, ಕುವೈಟ್ ತೆರಳಬೇಕಾದವರಿಗೆ ದುಬೈ, ಶಾರ್ಜಾಗೆ ಒಯ್ದು ಅಲ್ಲಿ ಕ್ವಾರಂಟೈನ್ ಮಾಡುವ ಪ್ಯಾಕೇಜ್ ವ್ಯವಸ್ಥೆ ಬಗ್ಗೆ ಹೇಳುತ್ತಾರೆ. ಇದೇ ರೀತಿ ವ್ಯಕ್ತಿಯೊಬ್ಬರಿಗೆ ಮಂಗಳೂರಿನ ಟ್ರಾವೆಲ್ ಏಜನ್ಸಿಯವರು ಸ್ಟಾರ್ ಹೊಟೇಲ್ ವ್ಯವಸ್ಥೆ ಸೇರಿ ಕುವೈಟ್ ಪ್ರಯಾಣಕ್ಕೆ 1.25 ಲಕ್ಷ ರೂ.ಗಳ ಪ್ಯಾಕೇಜ್ ವ್ಯವಸ್ಥೆ ಮಾಡಿದ್ದರು. ಆದರೆ, ಹೀಗೆ ಹೋದ ವ್ಯಕ್ತಿಯನ್ನು ಮೋಸ ಮಾಡಲಾಗಿದ್ದು ಸ್ಟಾರ್ ಹೊಟೇಲ್ ಬದಲು ಸಾದಾ ಸೀದಾ ಲಾಡ್ಜ್ ನಲ್ಲಿ ಕುಳ್ಳಿರಿಸಿದ್ದರು. ಅಲ್ಲದೆ, ಊಟದ ವ್ಯವಸ್ಥೆಯೂ ಸರಿಯಾಗಿ ನೀಡದೆ ಲಕ್ಷಾಂತರ ರೂ. ಹಣ ಲೂಟಿ ಮಾಡಿದ್ದಾರೆ ಎಂದು ಆ ವ್ಯಕ್ತಿ ದೂರಿದ್ದಾರೆ.

ಈ ಬಗ್ಗೆ ಕೇಳಲು ಏಜನ್ಸಿಗೆ ಫೋನ್ ಮಾಡಿದರೆ, ರಿಸೀವ್ ಮಾಡುತ್ತಿರಲಿಲ್ಲ. ಅಲ್ಲದೆ, ಕೆಲವೊಮ್ಮೆ ರಿಸೀವ್ ಮಾಡಿದರೂ ಬೇಕಾದರೆ ಹೋಗಿ ಇಲ್ಲದಿದ್ದರೆ ಪ್ರಯಾಣದ ಟಿಕೆಟನ್ನೇ ರದ್ದು ಪಡಿಸುವ ಬೆದರಿಕೆ ಒಡ್ಡುತ್ತಾರೆ ಎಂದು ಬೇಸತ್ತ ಪ್ರಯಾಣಿಕರು ಟ್ರಾವೆಲ್ ಏಜನ್ಸಿಯ ದೋಖಾವನ್ನು ಹೇಳಿಕೊಂಡಿದ್ದಾರೆ. ಕರಾವಳಿಯಿಂದ ಇಂಥ ಪ್ಯಾಕೇಜ್ ನಂಬಿ ಹೋದ ಹಲವಾರು ಮಂದಿ ಮೋಸ ಹೋಗಿದ್ದಾರೆ. ಆದರೆ, ಅರ್ಧ ದಾರಿಯಲ್ಲಿ ಈ ಮೋಸ ಅರಿವಾಗುವುದರಿಂದ ಏನೂ ಮಾಡಲಾಗುತ್ತಿಲ್ಲ. ಅಲ್ಲದೆ, ಈ ಬಗ್ಗೆ ಪ್ರಶ್ನೆ ಮಾಡಿದರೆ ಟಿಕೆಟ್ ರದ್ದುಪಡಿಸುವ ಬೆದರಿಕೆ ನೀಡುತ್ತಿದ್ದಾರೆ.

ಮಂಗಳೂರು, ಉಡುಪಿಯಲ್ಲಿ ಹಲವಾರು ಟ್ರಾವೆಲ್ ಏಜನ್ಸಿಗಳು ಇದೇ ರೀತಿಯ ದಂಧೆಯಲ್ಲಿ ತೊಡಗಿರುವ ಬಗ್ಗೆ ಶಂಕೆ ಮೂಡಿದೆ. ಸಾಮಾನ್ಯವಾಗಿ ದುಬೈ, ಕುವೈಟ್ ಇನ್ನಿತರ ಸೌದಿ ರಾಷ್ಟ್ರಗಳಿಗೆ ಪ್ರಯಾಣಿಸಲು ವಿಮಾನ ಟಿಕೆಟ್ ದರ 20 ಸಾವಿರ ಆಸುಪಾಸು ಇರುತ್ತದೆ. ಆದರೆ, ಹೊಟೇಲ್ ಸೌಲಭ್ಯ ಸೇರಿ ಒಂದು ಲಕ್ಷಕ್ಕೂ ಹೆಚ್ಚು ಪ್ಯಾಕೇಜ್ ಬಿಲ್ ಮಾಡುವ ದಲ್ಲಾಳಿ ಟ್ರಾವೆಲ್ ಏಜನ್ಸಿಗಳು ಎನ್ನಾರೈಗಳನ್ನೇ ದೋಚುವ ಹೀನ ಕೆಲಸಕ್ಕೆ ಕೈಹಾಕಿವೆ. ಸ್ಟಾರ್ ಹೊಟೇಲ್ ಹೆಸರಲ್ಲಿ ಸಾಮಾನ್ಯ ಹಾದಿ ಬೀದಿಯ ಲಾಡ್ಜ್ ಗಳಲ್ಲಿ ಇರಿಸಿ, ಎನ್ನಾರೈಗಳನ್ನೇ ವಂಚಿಸುತ್ತಿರುವ ವಿಚಾರ ಬಯಲಾಗಿದೆ.
Travels agencies in Mangalore are constantly cheating NRI's with corona air ticket and package in lakhs between Mangalore to Dubai and Kuwait has come to light.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm