ಬ್ರೇಕಿಂಗ್ ನ್ಯೂಸ್
27-01-21 12:13 pm Mangalore Correspondent ಕರಾವಳಿ
ಮಂಗಳೂರು, ಜ. 27: ಗುರುಪುರವನ್ನು ಸುತ್ತಿಕೊಂಡು ಹರಿಯುವ ಫಲ್ಗುಣಿ ನದಿಯ ನೀರು ದಿಢೀರ್ ಕಪ್ಪುಬಣ್ಣಕ್ಕೆ ತಿರುಗಿದೆ. ಕೆಲವು ಕಡೆ ನೀರಿನಲ್ಲಿ ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ.
ಇತ್ತ ನದಿ ನೀರು ಕಲುಷಿತ ಆಗಿರುವ ಮಧ್ಯೆಯೇ ಉಳಾಯಿಬೆಟ್ಟು, ಗುರುಪುರ, ಕಾರಮೊಗರು, ಏತಮೊಗರು ಆಸುಪಾಸಿನ ಪ್ರದೇಶಗಳಲ್ಲಿ ನದಿ ತೀರದ ನಿವಾಸಿಗಳ ಬಾವಿ ನೀರು ಕೂಡ ಕಪ್ಪಾಗಿದ್ದು ಮಾಲಿನ್ಯ ಮಿಶ್ರಿತವಾಗಿರುವುದು ಕಂಡುಬಂದಿದೆ.
ಗೋಳಿದಡಿಗುತ್ತಿನ ಶ್ರೀ ಮಹಾಕಾಲೇಶ್ವರ ದೇವರ ಉಜ್ಜೈನಿ ತೀರ್ಥಬಾವಿಯ ನೀರು ಸಂಪೂರ್ಣವಾಗಿ ಕಲುಷಿತವಾಗಿದೆ. ಎಂಆರ್ ಪಿಎಲ್, ಎಸ್ ಇಝೆಡ್ ವ್ಯಾಪ್ತಿಯ ಕಾರ್ಖಾನೆಗಳಿಂದ ನದಿಗೆ ಬಿಡುತ್ತಿರುವ ನೀರಿನಿಂದಾಗಿ ಮಳವೂರು ಡ್ಯಾಂನಲ್ಲಿ ಮತ್ತು ನದಿಯ ನೀರು ಕಪ್ಪಾಗಿದೆ. ಅಲ್ಲದೆ, ಆಸುಪಾಸಿನ ಬಾವಿಗಳ ನೀರು ಮಲಿನವಾಗಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಗುರುಪುರ, ಕಂದಾವರ, ಗಂಜಿಮಠ ಹಾಗೂ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನರಿಗೆ ಫಲ್ಗುಣಿ ನದಿಯಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ನದಿ ನೀರನ್ನು ಶುದ್ದೀಕರಿಸಿ ಪೂರೈಕೆ ಮಾಡಲಾಗುತ್ತದೆ ಎಂದು ಪಂಚಾಯತ್ ಅಧಿಕಾರಿಗಳು ಹೇಳುತ್ತಿದ್ದರೂ ಈ ನೀರು ಕುಡಿಯಲು ಯೋಗ್ಯವಲ್ಲ. ಶುದ್ದೀಕರಣ ಘಟಕವೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ದೂರಿನ ಪ್ರಕಾರ, ಉಪ ತಹಶೀಲ್ದಾರ್ ಶಿವಪ್ರಸಾದ್ ಮತ್ತು ಕಂದಾಯ ನಿರೀಕ್ಷಕ ನವನೀತ ಮಾಳವ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಈ ಹಿಂದೆ ಪಿಲಿಕುಳ ನಿಸರ್ಗಧಾಮದ ಬಳಕೆಗೆ ನೀಡಲಾಗುತ್ತಿದ್ದ ಮಂಗಳೂರು ನಗರಪಾಲಿಕೆಯ ವ್ಯಾಪ್ತಿಯ ತ್ಯಾಜ್ಯ ನೀರನ್ನು ಈಗ ಪಚ್ಚನಾಡಿಯಿಂದ ಮಂಜಲ್ಪಾದೆಯಾಗಿ ಫಲ್ಗುಣಿ ನದಿಗೆ ನೇರವಾಗಿ ಬಿಡಲಾಗುತ್ತಿದೆ. ಶುದ್ಧೀಕರಿಸದೆ ನೀರನ್ನು ಕೊಡುತ್ತಿದ್ದುದಕ್ಕೆ ಪಿಲಿಕುಳ ನಿಸರ್ಗಧಾಮ ಆಡಳಿತ ಆಕ್ಷೇಪಿಸಿ, ಪಾಲಿಕೆಯ ತ್ಯಾಜ್ಯ ನೀರನ್ನೇ ನಿರಾಕರಿಸಿತ್ತು. ಆನಂತರ ತ್ಯಾಜ್ಯ ನೀರನ್ನು ಮಂಜಲ್ಪಾದೆಯಿಂದ ನೇರವಾಗಿ ಫಲ್ಗುಣಿ ನದಿಗೆ ಬಿಡಲಾಗುತ್ತಿದೆ.
ಈ ಬಗ್ಗೆ ಹಿಂದೊಮ್ಮೆ ಮೂಡುಶೆಡ್ಡೆಯಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದೂ ಆಗಿತ್ತು. ಈಗ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು ಕಾರ್ಖಾನೆಗಳ ತ್ಯಾಜ್ಯದ ಜೊತೆಗೆ ಇಂಥ ತ್ಯಾಜ್ಯ ನೀರಿನ ಮಾಲಿನ್ಯವೂ ಕಾರಣವಾಗಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಇನ್ನೂ ಜಾಗೃತಗೊಂಡಿಲ್ಲ.
Factories Pollution surrounding river Phalguni in Mangalore has turned the river black by killing large number of fishes.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm