ಬ್ರೇಕಿಂಗ್ ನ್ಯೂಸ್
14-08-20 08:58 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರ್ಹರಲ್ಲದವರೂ ಬಿಪಿಎಲ್ ಪಡಿತರ ಚೀಟಿ ಪಡೆದು ಸೌಲಭ್ಯ ಅನುಭವಿಸುತ್ತಿರುವ ಬಗ್ಗೆ ಎರಡು ವರ್ಷಗಳಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದರು. ಇದೀಗ ಈ ಮಾಹಿತಿ ಲಭಿಸಿದ್ದು ನಿಮಯ ಉಲ್ಲಂಘಿಸಿ ಪಡಿತರ ಪಡೆದಿರುವ 6,956 ಮಂದಿಯನ್ನು ಪತ್ತೆ ಹಚ್ಚಲಾಗಿದೆ.
ದ.ಕ. ಜಿಲ್ಲೆಯಲ್ಲಿ ನಿಯಮ ಮೀರಿ 6,956 ಕುಟುಂಬಗಳು ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಆಧಾರದಲ್ಲಿ ಪಡಿತರ ಚೀಟಿ ಪಡೆದು, ಸವಲತ್ತುಗಳನ್ನು ಅನುಭವಿಸುತ್ತಿರುವುದು ಪತ್ತೆ ಆಗಿದೆ. ಹೀಗೆ ನಿಯಮ ಬಾಹಿರ ಪಡಿತರ ಇರುವವರು ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚು ಅನ್ನುವುದು ಕಂಡುಬಂದಿದೆ. ಮಂಗಳೂರು ಗ್ರಾಮಾಂತರ -477, ಮಂಗಳೂರು- 1,256, ಬಂಟ್ವಾಳ ತಾಲೂಕು - 1,301, ಪುತ್ತೂರು-1,247, ಬೆಳ್ತಂಗಡಿ- 1,873, ಸುಳ್ಯ-801 ಅನರ್ಹ ಕಾರ್ಡ್ ಗಳನ್ನು ಪತ್ತೆ ಮಾಡಲಾಗಿದೆ.
26 ಲಕ್ಷ ರೂಪಾಯಿ ದಂಡ ವಸೂಲಿ:
ಅನರ್ಹ ಪಡಿತರ ಚೀಟಿ ಪಡೆದವರಿಗೆ ಅಧಿಕಾರಿಗಳು ದಂಡವನ್ನೂ ವಿಧಿಸುತ್ತಿದ್ದಾರೆ. ಜನವರಿಯಿಂದ ಈ ತನಕ 26,89,406 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಆಹಾರ ಮತ್ತು ಸರಬರಾಜು ಇಲಾಖೆ ಮಾಹಿತಿ ನೀಡಿದೆ. ಬಿಪಿಎಲ್ ಪಡಿತರ ಕಾರ್ಡ್ ಅನ್ನು ಆ ಕುಟುಂಬ ಯಾವಾಗ ಪಡೆದುಕೊಂಡಿದ್ದ ವರ್ಷದಿಂದ ಹಿಡಿದು, ಸವಲತ್ತು ಉಪಯೋಗಿಸಿದ ಪ್ರಮಾಣ ಆಧರಿಸಿ ದಂಡ ವಿಧಿಸಲಾಗಿದೆ. ಮಂಗಳೂರು ಗ್ರಾಮಾಂತರ -3,63,339 ರೂ., ಮಂಗಳೂರು ನಗರ - 5,63,463 ರೂ., ಬಂಟ್ವಾಳ- 5,24,224 ರೂ., ಪುತ್ತೂರು- 49,535 ರೂ., ಬೆಳ್ತಂಗಡಿ- 8,80,006 ರೂ., ಸುಳ್ಯ ತಾಲೂಕಿನಲ್ಲಿ 3,08,839 ರೂ. ದಂಡ ಸಂಗ್ರಹಿಸಲಾಗಿದೆ.
ಸರಕಾರಿ ನೌಕರರಿಗೂ ದಂಡ !
ಸರಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೆ ದಂಡ ರಹಿತವಾಗಿ ಕಳೆದ 2019ರ ಸೆಪ್ಟೆಂಬರ್ 3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಚೀಟಿ ಒಪ್ಪಿಸಲು ಅವಕಾಶ ನೀಡಲಾಗಿತ್ತು. ಸ್ವತಃ ರದ್ದು ಮಾಡುವಂತೆ ಸರಕಾರ ನೀಡಿದ್ದ ಅವಕಾಶವನ್ನು ಆ ಬಳಿಕ ಅಕ್ಟೋಬರ್ 15ರ ತನಕ ವಿಸ್ತರಣೆ ಮಾಡಲಾಗಿತ್ತು. ಎರಡು ಬಾರಿ ನೀಡಿದ ಅವಕಾಶದಲ್ಲಿ ಪಡಿತರ ಚೀಟಿ ರದ್ದು ಮಾಡದೆ, ಇದ್ದ ಅನರ್ಹ ಪಡಿತರ ಚೀಟಿದಾರರಿಂದ ಈಗ ದಂಡ ವಸೂಲಿ ಮಾಡಲಾಗಿದೆ. ಅನಂತರ ಸರಕಾರ ದಂಡ ವಿಧಿಸುವುದನ್ನು ತಡೆ ಹಿಡಿದು ವಸೂಲಿ ಕಾರ್ಯಕ್ಕೆ ಆದೇಶ ನೀಡಿತ್ತು. ಈಗ ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದರೂ ದಂಡ ವಿಧಿಸಲಾಗುತ್ತಿದೆ. ಆದಾಯ ಪರಿಮಿತಿ, ಪಡಿತರ ಬಳಕೆಯ ಅವಧಿ ಆಧರಿಸಿ ಉಳಿದವರಿಗೆ ದಂಡ ವಿಧಿಸಲಾಗುತ್ತಿದೆ.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm