ಬ್ರೇಕಿಂಗ್ ನ್ಯೂಸ್
14-08-20 08:58 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರ್ಹರಲ್ಲದವರೂ ಬಿಪಿಎಲ್ ಪಡಿತರ ಚೀಟಿ ಪಡೆದು ಸೌಲಭ್ಯ ಅನುಭವಿಸುತ್ತಿರುವ ಬಗ್ಗೆ ಎರಡು ವರ್ಷಗಳಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದರು. ಇದೀಗ ಈ ಮಾಹಿತಿ ಲಭಿಸಿದ್ದು ನಿಮಯ ಉಲ್ಲಂಘಿಸಿ ಪಡಿತರ ಪಡೆದಿರುವ 6,956 ಮಂದಿಯನ್ನು ಪತ್ತೆ ಹಚ್ಚಲಾಗಿದೆ.
ದ.ಕ. ಜಿಲ್ಲೆಯಲ್ಲಿ ನಿಯಮ ಮೀರಿ 6,956 ಕುಟುಂಬಗಳು ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಆಧಾರದಲ್ಲಿ ಪಡಿತರ ಚೀಟಿ ಪಡೆದು, ಸವಲತ್ತುಗಳನ್ನು ಅನುಭವಿಸುತ್ತಿರುವುದು ಪತ್ತೆ ಆಗಿದೆ. ಹೀಗೆ ನಿಯಮ ಬಾಹಿರ ಪಡಿತರ ಇರುವವರು ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚು ಅನ್ನುವುದು ಕಂಡುಬಂದಿದೆ. ಮಂಗಳೂರು ಗ್ರಾಮಾಂತರ -477, ಮಂಗಳೂರು- 1,256, ಬಂಟ್ವಾಳ ತಾಲೂಕು - 1,301, ಪುತ್ತೂರು-1,247, ಬೆಳ್ತಂಗಡಿ- 1,873, ಸುಳ್ಯ-801 ಅನರ್ಹ ಕಾರ್ಡ್ ಗಳನ್ನು ಪತ್ತೆ ಮಾಡಲಾಗಿದೆ.
26 ಲಕ್ಷ ರೂಪಾಯಿ ದಂಡ ವಸೂಲಿ:
ಅನರ್ಹ ಪಡಿತರ ಚೀಟಿ ಪಡೆದವರಿಗೆ ಅಧಿಕಾರಿಗಳು ದಂಡವನ್ನೂ ವಿಧಿಸುತ್ತಿದ್ದಾರೆ. ಜನವರಿಯಿಂದ ಈ ತನಕ 26,89,406 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಆಹಾರ ಮತ್ತು ಸರಬರಾಜು ಇಲಾಖೆ ಮಾಹಿತಿ ನೀಡಿದೆ. ಬಿಪಿಎಲ್ ಪಡಿತರ ಕಾರ್ಡ್ ಅನ್ನು ಆ ಕುಟುಂಬ ಯಾವಾಗ ಪಡೆದುಕೊಂಡಿದ್ದ ವರ್ಷದಿಂದ ಹಿಡಿದು, ಸವಲತ್ತು ಉಪಯೋಗಿಸಿದ ಪ್ರಮಾಣ ಆಧರಿಸಿ ದಂಡ ವಿಧಿಸಲಾಗಿದೆ. ಮಂಗಳೂರು ಗ್ರಾಮಾಂತರ -3,63,339 ರೂ., ಮಂಗಳೂರು ನಗರ - 5,63,463 ರೂ., ಬಂಟ್ವಾಳ- 5,24,224 ರೂ., ಪುತ್ತೂರು- 49,535 ರೂ., ಬೆಳ್ತಂಗಡಿ- 8,80,006 ರೂ., ಸುಳ್ಯ ತಾಲೂಕಿನಲ್ಲಿ 3,08,839 ರೂ. ದಂಡ ಸಂಗ್ರಹಿಸಲಾಗಿದೆ.
ಸರಕಾರಿ ನೌಕರರಿಗೂ ದಂಡ !
ಸರಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೆ ದಂಡ ರಹಿತವಾಗಿ ಕಳೆದ 2019ರ ಸೆಪ್ಟೆಂಬರ್ 3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಚೀಟಿ ಒಪ್ಪಿಸಲು ಅವಕಾಶ ನೀಡಲಾಗಿತ್ತು. ಸ್ವತಃ ರದ್ದು ಮಾಡುವಂತೆ ಸರಕಾರ ನೀಡಿದ್ದ ಅವಕಾಶವನ್ನು ಆ ಬಳಿಕ ಅಕ್ಟೋಬರ್ 15ರ ತನಕ ವಿಸ್ತರಣೆ ಮಾಡಲಾಗಿತ್ತು. ಎರಡು ಬಾರಿ ನೀಡಿದ ಅವಕಾಶದಲ್ಲಿ ಪಡಿತರ ಚೀಟಿ ರದ್ದು ಮಾಡದೆ, ಇದ್ದ ಅನರ್ಹ ಪಡಿತರ ಚೀಟಿದಾರರಿಂದ ಈಗ ದಂಡ ವಸೂಲಿ ಮಾಡಲಾಗಿದೆ. ಅನಂತರ ಸರಕಾರ ದಂಡ ವಿಧಿಸುವುದನ್ನು ತಡೆ ಹಿಡಿದು ವಸೂಲಿ ಕಾರ್ಯಕ್ಕೆ ಆದೇಶ ನೀಡಿತ್ತು. ಈಗ ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದರೂ ದಂಡ ವಿಧಿಸಲಾಗುತ್ತಿದೆ. ಆದಾಯ ಪರಿಮಿತಿ, ಪಡಿತರ ಬಳಕೆಯ ಅವಧಿ ಆಧರಿಸಿ ಉಳಿದವರಿಗೆ ದಂಡ ವಿಧಿಸಲಾಗುತ್ತಿದೆ.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm