ಬ್ರೇಕಿಂಗ್ ನ್ಯೂಸ್
27-01-21 12:28 pm Udupi Correspondent ಕರಾವಳಿ
ಉಡುಪಿ, ಜ.27: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಮೆರವಣಿಗೆಯಲ್ಲಿ ಮೂರೂವರೆ ವರ್ಷದ ಪುಟಾಣಿ ಹುಡುಗಿಯೊಬ್ಬಳು ಸೇನಾ ಸಮವಸ್ತ್ರ ಧರಿಸಿ, ಕೈಯಲ್ಲಿ ಮೆಷಿನ್ ಗನ್ ಹಿಡಿದು ನಡೆದಾಡಿದ್ದು, ಎಲ್ಲರ ಗಮನ ಸೆಳೆದಿದ್ದಾಳೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು ಮೀನುಗಾರಿಕಾ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವ ರೀತಿ ಸಮವಸ್ತ್ರ ಧರಿಸಿದ್ದ ಪುಟಾಣಿ ನಡೆದಾಡುತ್ತಿದ್ದುದು ಗಮನ ಸೆಳೆದಿತ್ತು.


ಮೆರವಣಿಗೆಯಲ್ಲಿ ಇತರ ಪೊಲೀಸರು, ಎನ್ ಸಿಸಿ ಕೆಡೆಟ್ ಗಳ ಜೊತೆ ಗಮನ ಸೆಳೆದಿದ್ದು ಪುಟಾಣಿ ಮಯೂರಿ ಪ್ರಭು. ಮಯೂರಿಯ ತಂದೆ ರಾಘವೇಂದ್ರ ಪ್ರಭು ಉಡುಪಿ ಅಂಚೆ ಕಚೇರಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಶ್ರೀದೇವಿ ಗೃಹಿಣಿ. ತಮ್ಮ ಮಗಳು ಪೊಲೀಸ್ ಅಧಿಕಾರಿಯಾಗಬೇಕು ಎಂಬ ಕನಸಿಗೆ ನೀರೆರೆಯುವಂತೆ ಪೋಷಕರು ಸಣ್ಣಂದಿನಲ್ಲೇ ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಾಗ ಆಕೆಗೆ ಸೇನಾ ಸಮವಸ್ತ್ರವನ್ನು ತೊಡಿಸಿ, ಪಥಸಂಚಲನಕ್ಕೆ ಕರೆತರುತ್ತಾರೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಆಕೆಯ ಪೋಷಕರು ಸೇನಾ ಸಮವಸ್ತ್ರ ನೀಡಿದ್ದು ಕಾರ್ಯಕ್ರಮದಲ್ಲಿ ಆಕರ್ಷಣೆಗೆ ಕಾರಣವಾಯಿತು.

ಮಯೂರಿ ಕೊನೆಗೆ ಸಚಿವ ಎಸ್. ಅಂಗಾರ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ ಇಬ್ಬರೂ ಪುಟಾಣಿಗೆ ಶುಭ ಹಾರೈಸಿದ್ದಾರೆ.
Three and a half-year-old girl, in army uniform, with a machine gun in hand, stole the show at the Republic Day parade that was held in the city on Tuesday, January 26.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm