ಬ್ರೇಕಿಂಗ್ ನ್ಯೂಸ್
27-01-21 12:28 pm Udupi Correspondent ಕರಾವಳಿ
ಉಡುಪಿ, ಜ.27: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಮೆರವಣಿಗೆಯಲ್ಲಿ ಮೂರೂವರೆ ವರ್ಷದ ಪುಟಾಣಿ ಹುಡುಗಿಯೊಬ್ಬಳು ಸೇನಾ ಸಮವಸ್ತ್ರ ಧರಿಸಿ, ಕೈಯಲ್ಲಿ ಮೆಷಿನ್ ಗನ್ ಹಿಡಿದು ನಡೆದಾಡಿದ್ದು, ಎಲ್ಲರ ಗಮನ ಸೆಳೆದಿದ್ದಾಳೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು ಮೀನುಗಾರಿಕಾ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವ ರೀತಿ ಸಮವಸ್ತ್ರ ಧರಿಸಿದ್ದ ಪುಟಾಣಿ ನಡೆದಾಡುತ್ತಿದ್ದುದು ಗಮನ ಸೆಳೆದಿತ್ತು.


ಮೆರವಣಿಗೆಯಲ್ಲಿ ಇತರ ಪೊಲೀಸರು, ಎನ್ ಸಿಸಿ ಕೆಡೆಟ್ ಗಳ ಜೊತೆ ಗಮನ ಸೆಳೆದಿದ್ದು ಪುಟಾಣಿ ಮಯೂರಿ ಪ್ರಭು. ಮಯೂರಿಯ ತಂದೆ ರಾಘವೇಂದ್ರ ಪ್ರಭು ಉಡುಪಿ ಅಂಚೆ ಕಚೇರಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಶ್ರೀದೇವಿ ಗೃಹಿಣಿ. ತಮ್ಮ ಮಗಳು ಪೊಲೀಸ್ ಅಧಿಕಾರಿಯಾಗಬೇಕು ಎಂಬ ಕನಸಿಗೆ ನೀರೆರೆಯುವಂತೆ ಪೋಷಕರು ಸಣ್ಣಂದಿನಲ್ಲೇ ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಾಗ ಆಕೆಗೆ ಸೇನಾ ಸಮವಸ್ತ್ರವನ್ನು ತೊಡಿಸಿ, ಪಥಸಂಚಲನಕ್ಕೆ ಕರೆತರುತ್ತಾರೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಆಕೆಯ ಪೋಷಕರು ಸೇನಾ ಸಮವಸ್ತ್ರ ನೀಡಿದ್ದು ಕಾರ್ಯಕ್ರಮದಲ್ಲಿ ಆಕರ್ಷಣೆಗೆ ಕಾರಣವಾಯಿತು.

ಮಯೂರಿ ಕೊನೆಗೆ ಸಚಿವ ಎಸ್. ಅಂಗಾರ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ ಇಬ್ಬರೂ ಪುಟಾಣಿಗೆ ಶುಭ ಹಾರೈಸಿದ್ದಾರೆ.
Three and a half-year-old girl, in army uniform, with a machine gun in hand, stole the show at the Republic Day parade that was held in the city on Tuesday, January 26.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm