ಬ್ರೇಕಿಂಗ್ ನ್ಯೂಸ್
28-01-21 01:11 pm Mangalore Correspondent ಕರಾವಳಿ
ಮಂಗಳೂರು, ಜ. 28 : ಇಂಡೋನೇಷ್ಯಾದಲ್ಲಿ ಉದ್ಯೋಗ ದೊರಕಿಸುವುದಾಗಿ ಹೇಳಿ ಉಳ್ಳಾಲ ಮೂಲದ ಯುವಕನಿಗೆ ಟ್ರಾವೆಲ್ ಏಜೆನ್ಸಿಯವರು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಡಿಪ್ಲೊಮಾ ಓದಿರುವ ಯುವಕ ಮೊಹಮ್ಮದ್ ನಿಯಾಜ್ ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ಮಂಗಳೂರಿನ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಮಂಗಳೂರು ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲೀಕ ಶಮೀರ್ ರಿಜ್ವಾನ್, 6 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾನೆ.
"ಶಮೀರ್ ನನ್ನ ಮಗನಿಂದ ಉದ್ಯೋಗಕ್ಕಾಗಿ ಆತನ ಎಲ್ಲ ಸರ್ಟಿಫಿಕೇಟ್ ಇನ್ನಿತರ ದಾಖಲೆಗಳನ್ನು ತೆಗೆದುಕೊಂಡಿದ್ದಾನೆ. ವೀಸಾಕ್ಕಾಗಿ 6 ಲಕ್ಷ ರೂ. ಪಡೆದಿದ್ದರು. ನಾವು ಆತನಿಗೆ 6 ಲಕ್ಷ ರೂ. ನೀಡಿದರೆ ನನ್ನ ಮಗನಿಗೆ ತಿಂಗಳಿಗೆ 2 ಲಕ್ಷ ರೂ. ಸಂಬಳ ಇರುವ ಮೆಕ್ಯಾನಿಕಲ್ ಎಂಜಿನಿಯರ್ ಕೆಲಸವನ್ನು ಕೊಡಿಸುವುದಾಗಿ ಹೇಳಿದ್ದರು. ಬಳಿಕ ನನ್ನ ಮಗನನ್ನು ವಿಸಿಟಿಂಗ್ ವೀಸಾ ಮೂಲಕ ಇಂಡೋನೇಷ್ಯಾಕ್ಕೆ ಕರೆದೊಯ್ದಿದ್ದು ಅದಕ್ಕಾಗಿ 2019 ರ ಜುಲೈನಲ್ಲಿ 3.5 ಲಕ್ಷ ರೂ. ಮತ್ತು 2020 ಫೆಬ್ರವರಿಯಲ್ಲಿ 2.5 ಲಕ್ಷ ರೂ. ನೀಡಿದ್ದೇನೆ ಎಂದು ಯುವಕನ ತಂದೆ ಅಬ್ದುಲ್ ಅಜೀಜ್ ದೂರಿದ್ದಾರೆ.
2020 ರ ಫೆಬ್ರವರಿಯಿಂದ ಸೆಪ್ಟೆಂಬರ್ ವರೆಗೆ ಇತರ ಮೂವರ ಜೊತೆ ಇಂಡೋನೇಷ್ಯಾದಲ್ಲಿ ರೂಮಿನಲ್ಲಿದ್ದೆ. ಸೆಪ್ಟೆಂಬರ್ನಲ್ಲಿ ನಮ್ಮನ್ನು ವಲಸೆ ಅಧಿಕಾರಿಗಳು ದೇಶದಲ್ಲಿ ಅಕ್ರಮವಾಗಿ ಉಳಿದ ಆರೋಪದಲ್ಲಿ ಬಂಧಿಸಿದ್ದು 14 ದಿನಗಳ ಜೈಲಿಗೆ ಹಾಕಿದ್ದರು. ಪ್ರಕರಣದಲ್ಲಿ ಕಾನೂನು ಹೋರಾಟ ಮಾಡಿದ ಬಳಿಕ ನಮ್ಮನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಂತ್ರಸ್ತ ನಿಯಾಜ್ ಹೇಳಿದ್ದಾರೆ. ಮಂಗಳೂರಿಗೆ ವಾಪಸ್ ಬರಲು 8 ಲಕ್ಷ ರೂ. ಖರ್ಚು ಆಯ್ತು ಎಂದು ನಿಯಾಜ್ ತಿಳಿಸಿದ್ದಾರೆ.
A youth from Ullal, who was searching for a job was cheated by a tours and travels agency of Mangalore and lost six lac rupees and was jailed in Indonesia. The youth, Mohammed Niyaz, who is a diploma holder, has registered a complaint against the owner of the travel agency.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm