ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.
ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm