ಬ್ರೇಕಿಂಗ್ ನ್ಯೂಸ್
29-01-21 12:50 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.29: ಇಲ್ಲಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಜಲಪಾತದಲ್ಲಿ ಬಂಡೆ ಕುಸಿದು ಬಿದ್ದು ಯುವಕ ಮಣ್ಣಿನಡಿಗೆ ಬಿದ್ದ ಪ್ರಕರಣದಲ್ಲಿ ಸತತ ನಾಲ್ಕನೇ ದಿನವೂ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಉಜಿರೆಯ ಯುವಕ ಸನತ್ ಶೆಟ್ಟಿ (20) ಮತ್ತು ಇತರ ಮೂವರು ಜಲಪಾತದಲ್ಲಿ ನೀರಾಟ ಆಡುತ್ತಿದ್ದಾಗ ಬಂಡೆ ಕುಸಿದು ಘಟನೆ ಸಂಭವಿಸಿತ್ತು. ಸನತ್ ಮಣ್ಣಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದ್ದು, ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕ ಮಾತ್ರ ಪತ್ತೆಯಾಗಿಲ್ಲ.
ಕಾಡಿನ ಮಧ್ಯೆ ಈ ಜಾಗ ಇರುವುದರಿಂದ ಜೆಸಿಬಿ ಆಗಲೀ, ಇನ್ನಿತರ ಆಧುನಿಕ ತಂತ್ರಜ್ಞಾನದ ಪರಿಕರಗಳನ್ನು ಅಲ್ಲಿಗೆ ಒಯ್ಯಲು ಸಾಧ್ಯವಾಗುತ್ತಿಲ್ಲ. ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿರುವುದರಿಂದ ಅದನ್ನು ಒಡೆಯುವುದಾಗಲೀ, ಎಬ್ಬಿಸುವುದಾಗಲೀ ಮಾನವ ಶ್ರಮದಿಂದ ಸಾಧ್ಯವಿಲ್ಲ ಎಂಬ ಮಾತನ್ನು ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಲಹೆ ಮೇರೆಗೆ ಯಾವುದೇ ರೀತಿಯಲ್ಲಾದರೂ ಬಂಡೆಯನ್ನು ಒಡೆದು ಯುವಕನ ಪತ್ತೆ ಮಾಡಲು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಗುರುವಾರ ಪುತ್ತೂರು ವಿಭಾಗೀಯ ಕಮಿಷನರ್ ಸತೀಶ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾರ್ಯಾಚರಣೆಗೆ ನೇತೃತ್ವ ನೀಡಿದ್ದಾರೆ. ಅಲ್ಲದೆ, ಬೆಳ್ತಂಗಡಿ ಎಸ್ಐ ನಂದಕುಮಾರ್ ಮೂಲಕ ಶುಕ್ರವಾರ ಕ್ರಷರ್ ಯಂತ್ರವನ್ನು ಸ್ಥಳಕ್ಕೆ ಒಯ್ಯಲು ಸೂಚನೆ ನೀಡಿದ್ದಾರೆ. ರಸ್ತೆ ಇಲ್ಲದಿರುವ ಕಾರಣದಿಂದಾಗಿ ದೊಡ್ಡ ಯಂತ್ರಗಳನ್ನು ಸ್ಥಳಕ್ಕೆ ಒಯ್ಯಲು ಕಷ್ಟವಾಗಿದೆ. ಹಾಗಿದ್ದರೂ, ಜಿಲ್ಲಾಡಳಿತ ಯಾವುದೇ ರೀತಿಯಲ್ಲಾದರೂ ಯುವಕನನ್ನು ಪತ್ತೆ ಮಾಡಬೇಕೆಂದು ಸೂಚನೆ ನೀಡಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬಂದಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Belthangady Landslide at Badamane Abbi waterfall Youth from Ujire dead body stuck amid rock crusher used to destroy rock and recover the body.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm