ಬ್ರೇಕಿಂಗ್ ನ್ಯೂಸ್
29-01-21 12:50 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.29: ಇಲ್ಲಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಜಲಪಾತದಲ್ಲಿ ಬಂಡೆ ಕುಸಿದು ಬಿದ್ದು ಯುವಕ ಮಣ್ಣಿನಡಿಗೆ ಬಿದ್ದ ಪ್ರಕರಣದಲ್ಲಿ ಸತತ ನಾಲ್ಕನೇ ದಿನವೂ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಉಜಿರೆಯ ಯುವಕ ಸನತ್ ಶೆಟ್ಟಿ (20) ಮತ್ತು ಇತರ ಮೂವರು ಜಲಪಾತದಲ್ಲಿ ನೀರಾಟ ಆಡುತ್ತಿದ್ದಾಗ ಬಂಡೆ ಕುಸಿದು ಘಟನೆ ಸಂಭವಿಸಿತ್ತು. ಸನತ್ ಮಣ್ಣಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದ್ದು, ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕ ಮಾತ್ರ ಪತ್ತೆಯಾಗಿಲ್ಲ.
ಕಾಡಿನ ಮಧ್ಯೆ ಈ ಜಾಗ ಇರುವುದರಿಂದ ಜೆಸಿಬಿ ಆಗಲೀ, ಇನ್ನಿತರ ಆಧುನಿಕ ತಂತ್ರಜ್ಞಾನದ ಪರಿಕರಗಳನ್ನು ಅಲ್ಲಿಗೆ ಒಯ್ಯಲು ಸಾಧ್ಯವಾಗುತ್ತಿಲ್ಲ. ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿರುವುದರಿಂದ ಅದನ್ನು ಒಡೆಯುವುದಾಗಲೀ, ಎಬ್ಬಿಸುವುದಾಗಲೀ ಮಾನವ ಶ್ರಮದಿಂದ ಸಾಧ್ಯವಿಲ್ಲ ಎಂಬ ಮಾತನ್ನು ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಲಹೆ ಮೇರೆಗೆ ಯಾವುದೇ ರೀತಿಯಲ್ಲಾದರೂ ಬಂಡೆಯನ್ನು ಒಡೆದು ಯುವಕನ ಪತ್ತೆ ಮಾಡಲು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಗುರುವಾರ ಪುತ್ತೂರು ವಿಭಾಗೀಯ ಕಮಿಷನರ್ ಸತೀಶ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾರ್ಯಾಚರಣೆಗೆ ನೇತೃತ್ವ ನೀಡಿದ್ದಾರೆ. ಅಲ್ಲದೆ, ಬೆಳ್ತಂಗಡಿ ಎಸ್ಐ ನಂದಕುಮಾರ್ ಮೂಲಕ ಶುಕ್ರವಾರ ಕ್ರಷರ್ ಯಂತ್ರವನ್ನು ಸ್ಥಳಕ್ಕೆ ಒಯ್ಯಲು ಸೂಚನೆ ನೀಡಿದ್ದಾರೆ. ರಸ್ತೆ ಇಲ್ಲದಿರುವ ಕಾರಣದಿಂದಾಗಿ ದೊಡ್ಡ ಯಂತ್ರಗಳನ್ನು ಸ್ಥಳಕ್ಕೆ ಒಯ್ಯಲು ಕಷ್ಟವಾಗಿದೆ. ಹಾಗಿದ್ದರೂ, ಜಿಲ್ಲಾಡಳಿತ ಯಾವುದೇ ರೀತಿಯಲ್ಲಾದರೂ ಯುವಕನನ್ನು ಪತ್ತೆ ಮಾಡಬೇಕೆಂದು ಸೂಚನೆ ನೀಡಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬಂದಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Belthangady Landslide at Badamane Abbi waterfall Youth from Ujire dead body stuck amid rock crusher used to destroy rock and recover the body.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm