ಬ್ರೇಕಿಂಗ್ ನ್ಯೂಸ್
30-01-21 12:22 pm Mangalore Correspondent ಕರಾವಳಿ
ಮಂಗಳೂರು, ಜ.30 : ದುಬೈನಲ್ಲಿ ಕಳೆದ ಎಂಟು ತಿಂಗಳಿಂದ ಕೋಮಾದಲ್ಲಿದ್ದು, ಕಳೆದ ವಾರ ನಿಧನರಾದ ಮಂಗಳೂರು ಮೂಲದ ವ್ಯಕ್ತಿಯ ಮೃತದೇಹವನ್ನು ತಾಯ್ನಾಡಿಗೆ ಕಳುಹಿಸುವಲ್ಲಿ ಅನಿವಾಸಿ ಭಾರತೀಯರ ತಂಡ ಯಶಸ್ವಿಯಾಗಿದೆ.
ಮಂಗಳೂರಿನ ಕಾವೂರು ನಿವಾಸಿಯಾಗಿರುವ, ಅನಿವಾಸಿ ಕನ್ನಡಿಗ ದಿಲೀಪ್ (55) ಅವಿವಾಹಿತರಾಗಿದ್ದು ತಾಯಿ ಮತ್ತು ಅವಿವಾಹಿತ ಸಹೋದರಿಯರ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದರು. 15 ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ದಿಲೀಪ್, ಕಳೆದ ಏಪ್ರಿಲ್ ತಿಂಗಳಿನಲ್ಲಿ ಬ್ರೈನ್ ಸ್ಟ್ರೋಕ್ನ ಪರಿಣಾಮ ಕೋಮಾವಸ್ಥೆಗೆ ತಲುಪಿದ್ದರು’ ಎಂದು ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ತಿಳಿಸಿದ್ದಾರೆ.
ಸತತ ಎಂಟು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ದಿಲೀಪ್ ಕುಮಾರ್ ಕಳೆದ ಶುಕ್ರವಾರ ನಿಧನರಾದರು. ಅವರ ಮೃತದೇಹವನ್ನು ಇಂಡಿಯನ್ ಕಾನ್ಸುಲೇಟ್ ದುಬೈ, ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್), ಕನ್ನಡಿಗಾಸ್ ಫೆಡರೇಷನ್, ಇಂಡಿಯನ್ ಅಸೋಸಿಯೇಷನ್ ಅಜ್ಮಾನ್ ನೆರವಿನಿಂದ ಕೋವಿಡ್ ಸಂದರ್ಭದಲ್ಲಿ ಪಡೆಯಬೇಕಾದ ಎಲ್ಲ ಅನುಮತಿ ಪತ್ರಗಳನ್ನು ಪಡೆದು ತಾಯ್ನಾಡಿಗೆ ಕಳುಹಿಸಲಾಗಿದೆ.
ದಿಲೀಪ್ ಆರೋಗ್ಯದ ಕುರಿತು ಅಬ್ದುಲ್ ಕರೀಮ್ ನೇತೃತ್ವದ ಕೆಸಿಎಫ್ ತಂಡ ಕಾಳಜಿ ವಹಿಸುತ್ತಿತ್ತು. ಅವರ ತಾಯಿ, ಸಹೋದರಿಯರು ಮಗನ ಮುಖವನ್ನು ಕೊನೆಯ ಬಾರಿ ನೋಡಬೇಕು. ಹೇಗಾದರೂ ಮೃತದೇಹ ಕಳುಹಿಸಿ ಎಂದು ಕೋರಿಕೊಂಡಿದ್ದು ಕೋವಿಡ್ ಸಂದರ್ಭದಲ್ಲಿ ಮೃತದೇಹವನ್ನು ತಾಯ್ನಾಡಿಗೆ ತಲುಪಿಸಲು ಇತರೇ ಅನಿವಾಸಿ ಕನ್ನಡಿಗರ ಸಹಾಯ ಕೇಳಿತ್ತು.
ಕೂಡಲೇ ಕೆಎನ್ಆರ್ಐ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮತ್ತು ದುಬೈ ಕಾನ್ಸುಲೇಟ್ ಕಚೇರಿಯ ಕಾನ್ಸುಲ್ ಜಿತೇಂದ್ರ ಸಿಂಗ್ ನೇಗಿ ಅವರನ್ನು ಸಂಪರ್ಕಿಸಿದ್ದು ತಕ್ಷಣವೇ ಸ್ಪಂದಿಸಿ ಕಾನ್ಸುಲೇಟ್ ಮೂಲಕ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಅಜ್ಮಾನ್ ಇಂಡಿಯನ್ ಅಸೋಸಿಯೇಷನ್ನ ಛಾಯಾದೇವಿ ಕೃಷ್ಣಮೂರ್ತಿಯವರು ದಿಲೀಪ್ ವೀಸಾ, ಇಮಿಗ್ರೇಷನ್, ಡೆತ್ ಸರ್ಟಿಫಿಕೇಟ್ ಪಡೆಯಲು ಸಹಕರಿಸಿದರು. ಇದೆಲ್ಲರ ಫಲವಾಗಿ ದಿಲೀಪ್ ಮೃತದೇಹ ದುಬೈನಿಂದ ಮಂಗಳೂರಿಗೆ ತಲುಪಿದೆ ಎಂದು ಹಿದಾಯತ್ ಹೇಳಿದರು.
ದಿಲೀಪ್ ಸಹೋದರಿ ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್ ಮಾಡಿಸುತ್ತಿದ್ದರು. ಸೋದರನ ಆದಾಯವನ್ನೇ ನಂಬಿದ್ದ ಕುಟುಂಬ ದಿಲೀಪ್ ಆಸ್ಪತ್ರೆಗೆ ದಾಖಲಾದ ನಂತರ ಹಣದ ಕೊರತೆಯಿಂದ ಡಯಾಲಿಸಿಸ್ ಮಾಡಲಾಗದೆ ಮುಂದೂಡುತ್ತಿದ್ದಾರೆ. ಮದುವೆ ವಯಸ್ಸು ಮೀರಿದ ಸಹೋದರಿ ಮತ್ತು ತಾಯಿಗೆ ಆಸರೆ ಇಲ್ಲದಾಗಿದೆ.
The mortal remains of Dilip Kumar,57, a pastry chef working in Dubai, arrived at Mangaluru on Thursday. Dilip died on January 22, and Karnataka Cultural Foundation (KCF) and International Kannadigas Federation (IKF) helped in organising Dilip’s last journey from Dubai to Mangaluru.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am