ಬ್ರೇಕಿಂಗ್ ನ್ಯೂಸ್
30-01-21 02:51 pm Mangalore Correspondent ಕರಾವಳಿ
ಬಂಟ್ವಾಳ, ಜ.30: ತಾಲೂಕಿನ ಸರಪಾಡಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ತೆರಳಿದ್ದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಘೆರಾವ್ ಹಾಕಿದ ಘಟನೆ ನಡೆದಿದೆ.
ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕ್ಷೇತ್ರದ ಮಾಜಿ ಶಾಸಕ ರಮಾನಾಥ ರೈ ಯೋಜನೆಯ ಕಾಮಗಾರಿಯನ್ನು ನೋಡಲೆಂದು ಇಂದು ಸ್ಥಳಕ್ಕೆ ತೆರಳಿದ್ದರು. ಆದರೆ, ರಮಾನಾಥ ರೈ ಸ್ಥಳಕ್ಕೆ ಬರುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸೇರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಯಾಗಿದೆ. ಗೇಟ್ ತೆರೆದು ತನಗೆ ವೀಕ್ಷಿಸಲು ಅವಕಾಶ ನೀಡಬೇಕೆಂದು ರಮಾನಾಥ ರೈ ಪಟ್ಟು ಹಿಡಿದಾಗ ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಲ್ಲದೆ, ರಮಾನಾಥ ರೈ ಜೊತೆ ವಾಗ್ವಾದ ನಡೆಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆಕ್ರೋಶದ ಮಾತುಗಳು ವಿನಿಮಯ ಆಗಿದ್ದು ಪೊಲೀಸರ ನಡುವೆ ತಳ್ಳಾಟಕ್ಕೂ ಸಾಕ್ಷಿಯಾಯಿತು.


ಬಂಟ್ವಾಳದಿಂದ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದ್ದು ಸೇರಿದ್ದ ಕಾರ್ಯಕರ್ತರನ್ನು ಚದುರಿಸಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ನಾಳೆ ಭಾನುವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಲಿದ್ದು ಇದೇ ಸಂದರ್ಭದಲ್ಲಿ ಮಾಜಿ ಶಾಸಕರು ಸ್ಥಳಕ್ಕೆ ಬಂದಿದ್ದು ಬಿಜೆಪಿ ಕಾರ್ಯಕರ್ತರ ಆಕ್ಷೇಪಕ್ಕೆ ಕಾರಣವಾಗಿದೆ.

ರಮಾನಾಥ ರೈ ಈ ವೇಳೆ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಮಾಜಿ ಶಾಸಕ. ಸರಕಾರಿ ಯೋಜನೆಯನ್ನು ವೀಕ್ಷಿಸುವುದು ನನ್ನ ಹಕ್ಕು. ಅದನ್ನು ನಿರಾಕರಿಸುವಂತಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲದೆ ವೀಕ್ಷಿಸಲು ಅವಕಾಶ ನೋಡುವುದಿಲ್ಲ. ಮೇಲಿನ ಅಧಿಕಾರಿಗಳು ಪರ್ಮಿಶನ್ ನೀಡಿದರೆ ಅವಕಾಶ ನೀಡುತ್ತೇವೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಯಾಗಿದೆ. ಹೀಗಿರುವಾಗ ಅವಕಾಶ ನೀಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಮಾನಾಥ ರೈ ಮತ್ತು ಕಾಂಗ್ರೆಸ್ ನಾಯಕರ ನಿಯೋಗ ಸ್ಥಳದಿಂದ ತೆರಳಿದ್ದಾರೆ.
Video:
Clash erupts between BJP and Congress Members in Bantwal in Mangalore. The issue erupted regarding water project at Bantwal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm