ಬ್ರೇಕಿಂಗ್ ನ್ಯೂಸ್
30-01-21 04:10 pm Mangalore Correspondent ಕರಾವಳಿ
ಮಂಗಳೂರು, ಜ.30: ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳು ಸೇರಿ ಸರಕಾರ ನಡೆಸುತ್ತಿದ್ದು, ತಮ್ಮಲ್ಲೇ ಕಚ್ಚಾಟ ಮಾಡುತ್ತಿವೆ. ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯುವ ರೀತಿ ಅಲ್ಲಿನ ಸ್ಥಿತಿಯಿದೆ. ತಮ್ಮಲ್ಲೇ ಮೂರು ಬಾಗಿಲು ಮಾಡಿಕೊಂಡಿರುವ ಮಂದಿ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಗಡಿ ಕ್ಯಾತೆಯ ಹೇಳಿಕೆ ಹರಿಯ ಬಿಡುತ್ತಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕಾರ್ಯಕ್ರಮ ನಿಮಿತ್ತ ಮಂಗಳೂರಿನ ಬಿಜೆಪಿ ಕಚೇರಿಗೆ ಆಗಮಿಸಿದ್ದ ಲಕ್ಷ್ಮಣ ಸವದಿ, ಕಾರ್ಯಕರ್ತರ ಸನ್ಮಾನ ಸ್ವೀಕರಿಸಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.


ಮಹಾರಾಷ್ಟ್ರ ಸಿಎಂ ಉದ್ಧವ್, ಉದ್ಧಟತನದ ಹೇಳಿಕೆ ನೀಡುತ್ತಿದ್ದಾರೆ. ಕಾರವಾರ, ಬೆಳಗಾವಿ, ನಿಪ್ಪಾಣಿ ತಮ್ಮದೆಂದು ಹೇಳುತ್ತಿದ್ದಾರೆ. ಮರಾಠಿ ಭಾಷಿಗರು ಈ ಭಾಗದಲ್ಲಿ ಇದ್ದಾರೆಂದು ಅಲ್ಲಿನ ಭಾಗವನ್ನು ಮಹಾರಾಷ್ಟ್ರ ಎನ್ನಲು ಆಗುತ್ತದೆಯೇ ಎಂದು ಪ್ರಶ್ನಿಸಿದ ಸವದಿ, ಮರಾಠಿ ಮಾತನಾಡುವ ಮಂದಿ ಇಡೀ ಕರ್ನಾಟಕದಲ್ಲಿ ಇದ್ದಾರೆ. ಉತ್ತರ ಕರ್ನಾಟಕ ಹಲವೆಡೆ ಮರಾಠಿ ಭಾಷೆ ಮಾತನಾಡುವ ಮಂದಿ ವಾಸವಿದ್ದಾರೆ. ಹಾಗೆಂದು ಮುಂಬೈನಲ್ಲಿ ಕನ್ನಡ ಮಾತನಾಡುವ ಮಂದಿ ಬಹಳಷ್ಟು ಮಂದಿ ಇದ್ದಾರೆ. ಕರಾವಳಿ ಭಾಗದಿಂದ ಹೋಗಿ ಅಲ್ಲಿ ನೆಲೆಸಿದವರು ಕನ್ನಡ, ತುಳು ಮಾತನಾಡುತ್ತಾರೆ. ಹಾಗೆಂದು ಮುಂಬೈಯನ್ನು ಕರ್ನಾಟಕಕ್ ಕೊಡಿ ಎನ್ನಲಾಗುತ್ತದೆಯೇ ಎಂದು ಪ್ರಶ್ನಿಸಿದರು.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿಯನ್ನು ಎರಡನೇ ರಾಜಧಾನಿ ಎಂದು ಪರಿಗಣಿಸಲಾಗಿದೆ. ಅಲ್ಲಿ ವಿಧಾನಸಭೆ ಅಧಿವೇಶನ ನಡೆಸುವುದನ್ನು ಮಾಡಿಕೊಂಡು ಬಂದಿದ್ದೇವೆ. ಇಂಥ ಸಂದರ್ಭದಲ್ಲಿ ಬೆಳಗಾವಿ ಮೇಲೆ ಹಕ್ಕು ಸ್ಥಾಪಿಸುವ ಹೇಳಿಕೆ ನೀಡುವುದೇ ಅಸಂಬದ್ಧ. ಮಹಾರಾಷ್ಟ್ರ ನಾಯಕರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಕರಾವಳಿ ಕಾರ್ಯಕರ್ತರ ಬಗ್ಗೆ ಹೆಮ್ಮೆ
ಇದಕ್ಕೂ ಮುನ್ನ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಸವದಿ, ಬೇರೆ ಕಡೆಗೆ ಹೋಲಿಸಿದರೆ ಕರಾವಳಿ ಭಾಗದ ಕಾರ್ಯಕರ್ತರು ಪಕ್ಷದ ಬಗ್ಗೆ ಹೆಚ್ಚು ಅಭಿಮಾನ, ಗೌರವ ಇದ್ದವರು. ಹಾಗಾಗಿ ಇಲ್ಲಿನ ಕಾರ್ಯಕರ್ತರ ಬಗ್ಗೆ ವಿಶೇಷ ಗೌರವ ಇದೆ. ನನ್ನಿಂದ ಯಾವುದೇ ರೀತಿಯ ಕೆಲಸಗಳಾಗಬೇಕಿದ್ದರೂ, ಕಾರ್ಯಕರ್ತರು ನೇರವಾಗಿ ಫೋನ್ ಮಾಡಬಹುದು. ಬೆಂಗಳೂರಿನ ಮನೆ ಮತ್ತು ಕಚೇರಿಯಲ್ಲಿ ಸದಾ ಲಭ್ಯನಿದ್ದೇನೆ. ಬಂದು ಭೇಟಿ ಮಾಡಬಹುದು ಎಂದು ಹೇಳಿದರು.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 09:31 pm
HK News Desk
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm