ಬ್ರೇಕಿಂಗ್ ನ್ಯೂಸ್
31-01-21 05:08 pm Mangaluru Correspondent ಕರಾವಳಿ
ಮಂಗಳೂರು, ಜ.31: ಪ್ರತಿ ನಾಗರಿಕನಿಗೂ ಶುದ್ಧ ಕುಡಿಯುವ ನೀರು ಅವಶ್ಯಕವಾಗಿದ್ದು ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಬಂಟ್ವಾಳ ತಾಲೂಕಿನ ಸ್ಪರ್ಶ ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಂತೆ ಬಹುಗ್ರಾಮ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯಡಿ 62 ಕೋಟಿ ರೂ. ಅನುದಾನದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

ನೀರಿನ ಮೂಲಗಳಾದ ಕೆರೆ, ನದಿ, ಅಣೆಕಟ್ಟುಗಳಿಂದ ನೀರನ್ನು ಸಂಗ್ರಹಿಸಿ ರಾಜ್ಯದ ಪ್ರತಿ ಮನೆ ಮನೆಗೂ ನೀರು ತಲುಪುವಂತಾಗಬೇಕು ಹಾಗೂ ದಿನದ 24 ಗಂಟೆಗಳ ಕಾಲವೂ ಶುದ್ಧ ಕುಡಿಯುವ ನೀರು ಪೂರೈಕೆ ಆಗಬೇಕು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು ತಮ್ಮ ಜಿಲ್ಲೆಯಲ್ಲಿ ಯಾವ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇವೆ ಎಂದು ಗುರುತಿಸಿ ಅದನ್ನು ಸರಿಪಡಿಸಲು ಕಾರ್ಯವನ್ನು ಮಾಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕುಡಿಯುವ ನೀರಿನ ಯೋಜನೆಯು ಬಹಳ ವೇಗವಾಗಿ, ಸಮರ್ಪಕವಾಗಿ ಹಾಗೂ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ನಿರ್ಮಾಣವಾಗಿರುವುದು ಬಹಳ ಸಂತೋಷಕರ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಮಾತನಾಡಿ, ಬಂಟ್ವಾಳ ತಾಲೂಕು ನರಿಕೊಂಬು ಮತ್ತು ಇತರೆ 38 ಜನ ವಸತಿ ಪ್ರದೇಶಗಳಿಗೆ ಹಾಗೂ ಸರಪಾಡಿ ಮತ್ತು ಇತರೆ 95 ಜನ ವಸತಿ ಪ್ರದೇಶಗಳಿಗೆ 22.55 ಕೋಟಿ ಮತ್ತು 38.70 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ ಎಂದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಒಟ್ಟು 39 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ಯೋಜನೆಗಳು 30 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಿರುತ್ತದೆ. ಇನ್ನುಳಿದ ವೀರಕಂಬ, ಬೋಳಂತೂರು, ಸಜೀಪ ಮುನ್ನೂರು, ಸಜೀಪ ಮೂಡ ಮತ್ತು ಮಂಚಿ ಗ್ರಾಮ ಪಂಚಾಯತಿಗಳ ಒಟ್ಟು 49 ಜನ ವಸತಿ ಪ್ರದೇಶಗಳಿಗೆ ಹಾಗೂ ಉಳ್ಳಾಲ ನಗರಸಭೆ, ಕೋಟೆಕಾರು ಪಟ್ಟಣ ಪಂಚಾಯತಿಗಳಿಗೆ ನೇತ್ರಾವತಿ ನದಿಯಿಂದ ನೀರು ಸರಬರಾಜು ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಕೇಂದ್ರ ಜಲ ಜೀವನ ಮಿಷನ್ ಯೋಜನೆಯಡಿ 2024 ರ ಒಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೆ ನಳಗಳ ಮೂಲಕ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆಗೆ ಸಂಬಂದಿಸಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 30 ಗ್ರಾಮ ಪಂಚಾಯತಿಗಳ 46 ಗ್ರಾಮಗಳಿಗೆ ಅಂದಾಜು 33.72 ಕೋಟಿ ವೆಚ್ಚದ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದ್ದು, ಈ ಯೋಜನೆ ಅನುಷ್ಟಾನಗೊಳ್ಳಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು, ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸೆಲ್ವಮಣಿ. ಆರ್, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಪಂ ಅಭಿಯಂತರರಾದ ನರೇಂದ್ರ ಬಾಬು, ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ, ಮಂಜುಳಾ, ಕಮಲಾಕ್ಷೀ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm