ಬ್ರೇಕಿಂಗ್ ನ್ಯೂಸ್
02-02-21 06:15 pm Mangalore Correspondent ಕರಾವಳಿ
ಮಂಗಳೂರು, ಫೆ.2 : ಮೂರು ಬಾರಿ ಶಾಸಕರಾಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಜ್ಜನ ರಾಜಕಾರಣಿಯಾಗಿರುವ ಕರಾವಳಿಯ ಪ್ರಬಲ ಬಂಟ ಸಮುದಾಯದ ಪ್ರತಾಪಚಂದ್ರ ಶೆಟ್ಟಿಯವರನ್ನು ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು ಸಭಾಪತಿ ಸ್ಥಾನದಿಂದ ಇಳಿಸಲು ಪಿತೂರಿ ಮಾಡಿದೆ. ಅವರನ್ನು ಬಲವಂತವಾಗಿ ರಾಜೀನಾಮೆ ಪಡೆಯಲು ಯತ್ನಿಸುತ್ತಿರುವ ಬೆಳವಣಿಗೆ ಕರಾವಳಿಯ ಜಿಲ್ಲೆಗೆ ಹಾಗೂ ಬಂಟ ಸಮುದಾಯಕ್ಕೆ ಮಾಡುತ್ತಿರುವ ಅವಮಾನ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಆರೋಪಿಸಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಸಭಾಪತಿಯ ಅಧಿಕಾರಾವಧಿ ಮುಗಿಯದೆ ಅವರನ್ನು ರಾಜೀನಾಮೆ ಕೊಡಿಸುವ ಅಥವಾ ಕೆಳಗಿಳಿಸುವ ಪ್ರಯತ್ನ ನಡೆದಿಲ್ಲ. ಆದರೆ ಬಿಜೆಪಿ ಮತ್ತು ಜೆಡಿಎಸ್ ಆ ಕೆಲಸವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.
ಪ್ರತಾಪಚಂದ್ರ ಶೆಟ್ಟಿ ಶ್ರೀಮಂತ ಕುಟಂಬದವರಾಗಿದ್ದು, ವಿಜಯ ಬ್ಯಾಂಕ್ ಅಧಿಕಾರಿಯಾಗಿದ್ದಾಗ ರಾಜಕೀಯ ಸೇವೆಯ ಉದ್ದೇಶದಿಂದ ಕೆಲಸ ತೊರೆದವರು. ಮೂರು ಬಾರಿ ಶಾಸಕರಾಗಿ ಜನಸೇವೆ ಸಲ್ಲಿಸಿದ್ದರೂ ಮಂತ್ರಿಗಿರಿಗಾಗಿ ಹಾತೊರೆದವರಲ್ಲ. ಭ್ರಷ್ಟಾಚಾರ ರಹಿತ ಹೆಮ್ಮೆಯ ರಾಜಕಾರಣಿಗೆ ಈ ರೀತಿ ಅವಮಾನ ಮಾಡುತ್ತಿರುವುದನ್ನು ಕಂಡು ಬೇಸರವಾಗುತ್ತಿದೆ. ಅಧಿಕಾರ ದಾಹದಿಂದ ಬಿಜೆಪಿ ಹಾಗೂ ಜೆಡಿಎಸ್ ಈ ಕೃತ್ಯ ನಡೆಸುತ್ತಿದೆ ಎಂದು ಆರೋಪಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಪ್ರತಾಪಚಂದ್ರ ಶೆಟ್ಟಿಯವರನ್ನು ರಾಜೀನಾಮೆಗೆ ಮುಂದಾಗಿಸಿರುವ ಈ ಬೆಳವಣಿಗೆ ಕಂಡು ಕೇಳರಿಯದ ಘಟನೆಗೆ ಸಾಕ್ಷಿಯಾಗುತ್ತಿದೆ. ಇದು ಬಂಟ ಸಮುದಾಯಕ್ಕೆ ಮಾಡಲಾಗುತ್ತಿರುವ ವಿಶ್ವಾಸದ್ರೋಹ ಎಂದರು.
ಗೋಷ್ಠಿಯಲ್ಲಿ ಮನಪಾ ಸದಸ್ಯ ಪ್ರವೀಣ್ ಚಂದ್ರ ಆಳ್ವ ಉಸ್ಥಿತರಿದ್ದರು.
Bjp and Jds are trying to Dismiss Prathachandra Shetty from the Position of Speaker says Abhayachandra Jain and Mithun Rai at a press meet held at Mangalore.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am