ಬ್ರೇಕಿಂಗ್ ನ್ಯೂಸ್
02-02-21 06:21 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರಾಗಿರುವ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿಜೈ ಕಾಪಿಕಾಡಿನಲ್ಲಿ ಅಪಾರ್ಟ್ಮೆಂಟಿನಲ್ಲಿ ಒಂದು ಫ್ಲ್ಯಾಟ್, ಪಡೀಲಿನಲ್ಲಿ ಮತ್ತೊಂದು ಮನೆ, ಮತ್ತೆರಡು ಕಡೆ ನಿವೇಶನಗಳನ್ನು ಹೊಂದಿರುವುದು ಪತ್ತೆಯಾಗಿದೆ. ಅಲ್ಲದೆ, ಬಿಜೈನ ಮನೆಯಲ್ಲಿ 7.5 ಲಕ್ಷ ರೂ. ನಗದು ಮತ್ತು 1.5 ಕೋಟಿ ರೂ. ಮೊತ್ತದ ಡಿಡಿ ಇನ್ನಿತರ ಆಸ್ತಿ ದಾಖಲೆ ಪತ್ರ, ಪತ್ನಿಯ ಖಾತೆಯಲ್ಲಿ ಒಂದು ಕೋಟಿ ರೂ. ಹಣ ಹಾಗೂ ಪತ್ನಿಯ ಕೇರಳದ ಮನೆಯಲ್ಲಿ 160 ಗ್ರಾಮ್ ಚಿನ್ನಾಭರಣ ಪತ್ತೆಯಾಗಿದೆ.
ಜಯರಾಜ್ ಮೈಸೂರಿನಲ್ಲಿಯೂ ಮತ್ತೊಂದು ನಿವೇಶನ ಹೊಂದಿರುವುದು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಕೇರಳದ ಮಾಹೆಯಲ್ಲಿ ಜಯರಾಜ್ ಪತ್ನಿ ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಅಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿನ ಮನೆಗೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಜಯರಾಜ್ ಮೂಲತಃ ಕೇರಳದವನಾಗಿದ್ದು, ಕಳೆದ ಆರು ವರ್ಷಗಳಿಂದ ಮಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಜಂಟಿ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ.
Read: ಮಂಗಳೂರಿನಲ್ಲಿ ಎಸಿಬಿ ರೈಡ್ ; ಮಹಾನಗರ ಪಾಲಿಕೆಯ ಅಧಿಕಾರಿ ಮನೆ, ಕಚೇರಿ ಪರಿಶೀಲನೆ
The ACB officials have gathers more than three crores wealth in the Raid on MCC Joint Director Jayaraj here in Mangalore.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm